ETV Bharat / state

ಕೇಂದ್ರ ಸರ್ಕಾರದ ಆರ್​ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ರೈತರ ಪ್ರತಿಭಟನೆ

author img

By

Published : Nov 1, 2019, 10:27 AM IST

ಕೇಂದ್ರ ಸರ್ಕಾರದ ಆರ್​ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ,ಮಂಡ್ಯ ಹಾಲು ಉತ್ಪಾದಕರ ಸಹಕಾರ ಸಂಘ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಜನರು ರಸ್ತೆಗಳಿದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಆರ್​ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ರೈತರ ಪ್ರತಿಭಟನೆ

ಮಂಡ್ಯ: ಕೇಂದ್ರ ಸರ್ಕಾರದ ಆರ್​ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ,ಮಂಡ್ಯ ಹಾಲು ಉತ್ಪಾದಕರ ಸಹಕಾರ ಸಂಘ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಜನರು ರಸ್ತೆಗಳಿದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಆರ್​ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ರೈತರ ಪ್ರತಿಭಟನೆ

ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಸುಮಾರು 3 ಕಿಲೋ ಮೀಟರ್ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು,ಮೋದಿ ವಿರುದ್ಧ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅವೈಜ್ಞಾನಿಕ ಹಾಲಿನ ಆಮದು ಒಪ್ಪಂದಿಂದ ರೈತರಿಗೆ ಸಾಕಷ್ಟು ನಷ್ಟವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಈ ನಿರ್ಧಾರವನ್ನ ಕೈಬಿಡುವಂತೆ ಒತ್ತಾಯಿಸಿದರು. ರೈತರ ಹೋರಾಟಕ್ಕೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ವ್ಯಕ್ತಪಡಿಸಿದರು.

ಇನ್ನು, ಮುಕ್ತ ವ್ಯಾಪಾರ ಒಪ್ಪಂದವನ್ನ ಬಿಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಒಂದು ವೇಳೆ ಕೇಂದ್ರ ಸರ್ಕಾರ ಒಪ್ಪಂದ ಕೈಬಿಡದೇ ಇದ್ದಲ್ಲಿ ಬೃಹತ್​ ಹೋರಾಟ ನಡೆಸೋದಾಗಿ ಎಚ್ಚರಿಕೆ ನೀಡಿದರು.

Intro:ಮಂಡ್ಯ: ಕಾವೇರಿ ಹೋರಾಟದ ನಂತರ ಸಕ್ಕರೆ ನಗರಿ ಮತ್ತೊಂದು ದೊಡ್ಡ ಹೋರಾಟಕ್ಕೆ ಸಾಕ್ಷಿಯಾಯಿತು. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಅವೈಜ್ಞಾನಿಕ ಹಾಲಿನ ಆಮದು ಒಪ್ಪಂದದ ವಿರುದ್ಧ ರಸ್ತೆಗೆ ಇಳಿದು ಹೋರಾಟ ಮಾಡಿದರು. ರೈತರ ಹೋರಾಟಕ್ಕೆ ವಾಹನ ಸವಾರರು ಹೈರಾಣದ ಘಟನೆಯೂ ನಡೆಯಿತು. ಹಾಲು ಉತ್ಪಾದಕ ಸಹಕಾರ ಸಂಘದ ರೈತರ ಹೋರಾಟ ಹೇಗಿದೆ ಅನ್ನೋದನ್ನ ನೀವೇ ನೋಡಿ.


Body:ಮಂಡ್ಯ ನಗರದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಜನವೋ ಜನ. ಕೇಂದ್ರದ ಅವೈಜ್ಞಾನಿಕ ಹಾಲಿನ ಆಮದು ನೀತಿ ವಿರುದ್ಧ ಇವರೆಲ್ಲಾ ರಸ್ತೆಗೆ ಇಳಿದವರು‌‌. ಹಾಲಿನ ಆಮದಿನಿಂದ ಸ್ಥಳೀಯ ಉತ್ಪಾದಕರಿಕೆ ನಷ್ಟ ಉಂಟಾಗುತ್ತದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ಆಯೋಜನೆ ಮಾಡಿದ್ದ ಹೋರಾಟಕ್ಕೆ ಜಿಲ್ಲೆಯ ಎಲ್ಲಾ ಕಡೆಯಿಂದ 10 ಸಾವಿರಕ್ಕೂ ಹೆಚ್ಚು ರೈತರು ಹೋರಾಟಕ್ಕೆ ಆಮಿಸಿ ಕೇಂದ್ರದ ವಿರುದ್ಧ ಆಕ್ರೋಶ ಹೊರ ಹಾಕಿದರು. ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಸುಮಾರು 3 ಕಿಲೋ ಮೀಟರ್ ಪ್ರತಿಭಟನಾ ಮೆರವಣಿಗೆ ನಡೆಸಿ ಒಪ್ಪಂದದಿಂದ ಹಿಂದೆ ಸರಿಯುವಂತೆ ಒತ್ತಾಯ ಮಾಡಿದರು.

ಪ್ಲೋ...


ರೈತರ ಬೃಹತ್ ಹೋರಾಟ ಮತ್ತೊಂದು ಚಳವಳಿಗೆ ಕಾರಣವಾಯಿತು. ಕಾವೇರಿ ಹೋರಾಟ ಹೊರತುಪಡಿಸಿ ಇಷ್ಟು ದೊಡ್ಡ ಮಟ್ಟದಲ್ಲಿ ಹೋರಾಟ ಆಯೋಜನೆ ಮಾಡಿದ್ದು ಜಿಲ್ಲೆಯಲ್ಲಿ ಮತ್ತೆ ಚಳವಳಿ ನಡೆಯಲಿದೆ ಎಂಬ ಎಚ್ಚರಿಕೆಯನ್ನು ನೀಡಲಾಗಿದೆ. ಇನ್ನು ರೈತರ ಹೋರಾಟಕ್ಕೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ವ್ಯಕ್ತಪಡಿಸಿದರು.

ಬೈಟ್: ಸುಮಲತಾ ಅಂಬರೀಶ್, ಸಂಸದೆ. ( ಬೈಟ್ ಮಹಿಳಾ ರೈಲ್ ಪೈಲ್‌ನಲ್ಲಿದೆ)


ರೈತರ ಹೋರಾಟ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಒಪ್ಪಂದದಿಂದ ಹಿಂದೆ ಸರಿಯುವಂತೆ ಒತ್ತಾಯ ಮಾಡಲಾಗಿದೆ. ಕೇಂದ್ರ ಹಿಂದೆ ಸರಿಯದೇ ಇದ್ದರೆ ಮತ್ತೊಂದು ಹೋರಾಟಕ್ಕೆ ಸಜ್ಜಾಗುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಇನ್ನು ರೈತರ ಹೋರಾಟ ವಾಹನ ಸವಾರರಿಗೆ ಸಂಕಷ್ಟವನ್ನು ತಂದಿತ್ತು.

ಯತೀಶ್ ಬಾಬು, ಮಂಡ್ಯ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.