ETV Bharat / state

ಮಂಡ್ಯ: ಟ್ರ್ಯಾಕ್ಟರ್, ಜಾನುವಾರುಗಳೊಂದಿಗೆ ರಸ್ತೆಗಿಳಿದು ರೈತರ ಪ್ರತಿಭಟನೆ

author img

By

Published : Oct 6, 2022, 1:18 PM IST

ಕಬ್ಬಿನ ದರ ನಿಗದಿ ಮಾಡಲು ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ರೈತರು ಜಾನುವಾರುಗಳೊಂದಿಗೆ ರಸ್ತೆಗಿಳಿದು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.

farmers protest in mandya
ಮಂಡ್ಯದಲ್ಲಿ ರೈತರ ಪ್ರತಿಭಟನೆ

ಮಂಡ್ಯ: ಐತಿಹಾಸಿಕ ದಸರಾ ದಿನವಾದ ನಿನ್ನೆ ರಾಜ್ಯ ಸರ್ಕಾರಕ್ಕೆ ರೈತರು ಶಾಕ್ ಕೊಟ್ಟಿದ್ದಾರೆ. ಮೈಸೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರಕ್ಕೆ ರೈತ ಸಂಘ ಬಿಸಿ ಮುಟ್ಟಿಸಿದೆ.

ಜಿಲ್ಲೆಯಾದ್ಯಂತ 8 ಕಡೆ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರು, ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿದರು. ಮಂಡ್ಯದ ವಿಸಿ ಫಾರಂ ಗೇಟ್​ನಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಮೈಸೂರಿಗೆ ತೆರಳುವ ವಾಹನಗಳನ್ನ ತಡೆದು ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಈ ವೇಳೆ ಎತ್ತಿ‌ನಗಾಡಿ, ಟ್ರ್ಯಾಕ್ಟರ್, ಕುರಿ, ಕೋಳಿ, ಜಾನುವಾರು, ನಾಯಿಗಳನ್ನ ರಸ್ತೆ ಮಧ್ಯೆ ಇರಿಸಿ ಆಕ್ರೋಶ ಹೊರಹಾಕಿದರು. ಬಳಿಕ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಮಂಡ್ಯದಲ್ಲಿ ರೈತರ ಪ್ರತಿಭಟನೆ

ಇದನ್ನೂ ಓದಿ: ಬಾಗಲಕೋಟೆ: ಭೂಸ್ವಾಧೀನ ವಿರೋಧಿಸಿ ರೈತರ ಬೃಹತ್ ಪ್ರತಿಭಟನೆ

ಇನ್ನು, ಮಂಡ್ಯದ ಶ್ರೀರಂಗಪಟ್ಟಣದ ಕಿರಂಗೂರು ಸರ್ಕಲ್ ಬಳಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಬೆಂಗಳೂರು - ಮೈಸೂರು -ಜೀವರ್ಗಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಜೊತೆಗೆ ಮಳವಳ್ಳಿಯ ಕನಕಪುರ ರಸ್ತೆ ಹಾಗೂ ಮದ್ದೂರಿನಲ್ಲಿ ಬೆಂಗಳೂರು-ಮೈಸೂರು, ತುಮಕೂರು ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಹಲವು ಬಾರಿ ಸರ್ಕಾರಕ್ಕೆ ರೈತರ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಲಾಗಿದೆ. ಆದ್ರೆ, ಸರ್ಕಾರ ರೈತರನ್ನ ನಿರ್ಲಕ್ಷ್ಯ ಮಾಡ್ತಿದೆ. ಟನ್ ಕಬ್ಬಿಗೆ 4,500 ರೂ. ನಿಗದಿ ಮಾಡಬೇಕು, ಎಸ್​ಎಪಿ ಘೋಷಣೆ ಮಾಡಬೇಕು ಎಂದು ಅನ್ನದಾತರು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.