ETV Bharat / state

ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಎದುರಾದ ಪ್ರವಾಹ ಭೀತಿ

author img

By

Published : Aug 4, 2022, 10:29 AM IST

Updated : Aug 4, 2022, 12:26 PM IST

ಶ್ರೀರಂಗಪಟ್ಟಣದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ರಂಗನತಿಟ್ಟು ಪಕ್ಷಿಧಾಮದಲ್ಲೂ ಬೋಟಿಂಗ್ ನಿಷೇಧಿಸಿದ್ದು, ಪ್ರವಾಸಿಗರ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ.

flood-threat-faced-again-in-cauvery-river-area
ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಎದುರಾದ ಪ್ರವಾಹ ಭೀತಿ

ಮಂಡ್ಯ: ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೆಆರ್​ಎಸ್ ಒಳಹರಿವಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿದ್ದು, ಅಷ್ಟೇ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ. ಇದರಿಂದಾಗಿ ಶ್ರೀರಂಗಪಟ್ಟಣದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ವಿಶ್ವವಿಖ್ಯಾತ ಪಕ್ಷಿಧಾಮವನ್ನು ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಿಸಲಾಗಿದ್ದು, ಕಾವೇರಿ ನದಿಯ ತಟದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬಹುತೇಕ ಮುಳುಗಡೆಯಾಗಿರುವ ರಂಗನತಿಟ್ಟು, ಆತಂಕದಲ್ಲಿ ಪಕ್ಷಿ ಸಂಕುಲ: ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ನಿಷೇಧಿಸಿದ್ದು, ಪ್ರವಾಸಿಗರ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ. ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಹಲವು ದೇಗುಲಗಳು ಮುಳುಗಡೆಯಾಗಿವೆ. ಚೆಕ್​ಪೊಸ್ಟ್ ಬಳಿಯ ಸಾಯಿ ಮಂದಿರ ಪ್ರವಾಹ ನೀರಿನಿಂದ ಸಂಪೂರ್ಣ ಜಲಾವೃತಗೊಂಡಿದೆ.

ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಎದುರಾದ ಪ್ರವಾಹ ಭೀತಿ

ಗಂಜಾಮ್ ಬಳಿಯ ನಿಮಿಷಾಂಭ ಪ್ರಸಿದ್ದ ದೇಗುಲದ ಬಾಗಿಲವರೆಗೂ ಪ್ರವಾಹ ನೀರು ಬಂದಿದೆ. ಪ್ರವಾಹದಿಂದಾಗಿ ಅಪಾಯದ ಮಟ್ಟದಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಪ್ರವಾಸಿಗರು ಸೇರಿದಂತೆ ಜನ ಜಾನುವಾರುಗಳು ನದಿ ದಂಡೆಯ ಬಳಿ ತೆರಳದಂತೆ ತಾಲೂಕು ಆಡಳಿತದಿಂದ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

Last Updated :Aug 4, 2022, 12:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.