ETV Bharat / state

ಗಂಧದ ಮರ ಕಡಿಯಲು ಬಂದವರ ಮೇಲೆ ಅರಣ್ಯಾಧಿಕಾರಿಗಳಿಂದ ಗುಂಡೇಟು: ಓರ್ವ ಗಂಭೀರ

author img

By

Published : Dec 1, 2022, 11:50 AM IST

Updated : Dec 1, 2022, 1:42 PM IST

ಗಂಧದ ಮರ ಕಡಿಯಲು ಬಂದಿದ್ದವರಲ್ಲಿ ಮೂವರು ಪೊಲೀಸರ ವಶದಲ್ಲಿದ್ದು, ಪರಾರಿಯಾಗಿರುವ ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

forest-officers-fired-at-who-came-cut-sandalwood
ಗಂಧದ ಮರ ಕಡಿಯಲು ಬಂದವರ ಮೇಲೆ ಅರಣ್ಯಾಧಿಕಾರಿಗಳಿಂದ ಗುಂಡೇಟು

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಎಚ್ ಎನ್ ಕಾವಲ್ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧ ಮರಗಳನ್ನು ಕಡಿಯುತ್ತಿದ್ದವರ ಮೇಲೆ ಅರಣ್ಯಾಧಿಕಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅಪ್ಪ ಹಾಗೂ ಇಬ್ಬರು ಮಕ್ಕಳ ಜೊತೆಗೆ ಇತರರು ಸೇರಿ ಶ್ರೀಗಂಧ ಕಳವಿಗೆ ಯತ್ನಿಸಿರುವುದಾಗಿ ತಿಳಿದುಬಂದಿದೆ.

ಹಾಸನ ಜಿಲ್ಲೆ ಬೇಲೂರು ತಾಲೂಕು ಗೆಂಡೆಹಳ್ಳಿಯ ಗೋವಿಂದಪ್ಪ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಗೋವಿಂದಪ್ಪನ ಮಕ್ಕಳಾದ ಶಂಕರ್ ಮತ್ತು ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ. ಗುಂಡೇಟಿಗೆ ಒಳಗಾಗಿರುವ ಗೋವಿಂದಪ್ಪನನ್ನು ಎ.ಸಿ.ಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಜೊತೆ ಬಂದಿದ್ದ ಇತರ ಆರೋಪಿಗಳು ಪರಾರಿಯಾಗಿದ್ದಾರೆ.

ಬುಧವಾರ ಸಂಜೆ ಅರಣ್ಯ ಪ್ರದೇಶಕ್ಕೆ ಅತಿಕ್ರಮವಾಗಿ ಪ್ರವೇಶಿಸಿದ ಗೋವಿಂದಪ್ಪ, ಶಂಕರ, ಕುಮಾರ ಹಾಗೂ ಇನ್ನಿತರರು ಶ್ರೀಗಂಧಮರ ಕಡಿಯುವ ಪ್ರಯತ್ನದಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಆಧರಿಸಿ ನಾಗಮಂಗಲ ಉಪ ವಲಯ ಅರಣ್ಯಾಧಿಕಾರಿ ಮಂಜು ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿದ್ದಾರೆ. ಅರಣ್ಯಾಧಿಕಾರಿಗಳು ದಾಳಿ ನಡೆಸಿದ ವೇಳೆ ಬೆಚ್ಚಿಬಿದ್ದ ಆರೋಪಿಗಳು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ತಪ್ಪಿಸಿಕೊಳ್ಳದಂತೆ ಅರಣ್ಯ ಇಲಾಖೆಯವರು ಸುತ್ತುವರಿದು, ಶರಣಾಗುವಂತೆ ಆರೋಪಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಲಾಗ್ತಿದೆ.

ಗಂಧದ ಮರ ಕಡಿಯಲು ಬಂದವರ ಮೇಲೆ ಅರಣ್ಯಾಧಿಕಾರಿಗಳಿಂದ ಗುಂಡೇಟು

ಅರಣ್ಯಾಧಿಕಾರಿಗಳ ಮಾತಿಗೆ ಮಣಿಯದ ಆರೋಪಿಗಳು ತಪ್ಪಿಸಿಕೊಳ್ಳುವ ಸಲುವಾಗಿ ಅರಣ್ಯ ಇಲಾಖೆ ಗಾಡ‌ ಸಾಕಯ್ಯ ಎಂಬಾತನ ಮೇಲೆ ಗೋವಿಂದಪ್ಪ ಮಚ್ಚು ಬೀಸಿದ್ದು, ಸಾಕಯ್ಯ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಆರೋಪಿಗಳು ಓಡಿಹೋಗುತ್ತಿದ್ದಾಗ ಉಪ ವಲಯ ಅರಣ್ಯಾಧಿಕಾರಿ ಮಂಜು ಹಾರಿಸಿದ ಗುಂಡು ಗೋವಿಂದಪ್ಪನಿಗೆ ತಗುಲಿ ಅಲ್ಲಿಯೇ ಕುಸಿದುಬಿದ್ದಿದ್ದಾನೆ. ಅಪ್ಪನಿಗೆ ಗುಂಡೇಟು ಬಿದ್ದಿದ್ದರಿಂದ ಭಯಭೀತರಾಗಿ ಮಕ್ಕಳಾದ ಶಂಕರ ಮತ್ತು ಕುಮಾರ ಅಪ್ಪನ ರಕ್ಷಣೆಗೆ ಧಾವಿಸಿದ ವೇಳೆ ಅರಣ್ಯಾಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡರು.

ಇವರೊಂದಿಗೆ ಬಂದಿದ್ದ ಉಳಿದ ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಅರಣ್ಯಾಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸೆಕ್ಯುರಿಟಿಗೆ ಧಮ್ಕಿ ಹಾಕಿ ಗಂಧದ ಮರ ಕಳ್ಳತನ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಎಚ್ ಎನ್ ಕಾವಲ್ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧ ಮರಗಳನ್ನು ಕಡಿಯುತ್ತಿದ್ದವರ ಮೇಲೆ ಅರಣ್ಯಾಧಿಕಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅಪ್ಪ ಹಾಗೂ ಇಬ್ಬರು ಮಕ್ಕಳ ಜೊತೆಗೆ ಇತರರು ಸೇರಿ ಶ್ರೀಗಂಧ ಕಳವಿಗೆ ಯತ್ನಿಸಿರುವುದಾಗಿ ತಿಳಿದುಬಂದಿದೆ.

ಹಾಸನ ಜಿಲ್ಲೆ ಬೇಲೂರು ತಾಲೂಕು ಗೆಂಡೆಹಳ್ಳಿಯ ಗೋವಿಂದಪ್ಪ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಗೋವಿಂದಪ್ಪನ ಮಕ್ಕಳಾದ ಶಂಕರ್ ಮತ್ತು ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ. ಗುಂಡೇಟಿಗೆ ಒಳಗಾಗಿರುವ ಗೋವಿಂದಪ್ಪನನ್ನು ಎ.ಸಿ.ಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಜೊತೆ ಬಂದಿದ್ದ ಇತರ ಆರೋಪಿಗಳು ಪರಾರಿಯಾಗಿದ್ದಾರೆ.

ಬುಧವಾರ ಸಂಜೆ ಅರಣ್ಯ ಪ್ರದೇಶಕ್ಕೆ ಅತಿಕ್ರಮವಾಗಿ ಪ್ರವೇಶಿಸಿದ ಗೋವಿಂದಪ್ಪ, ಶಂಕರ, ಕುಮಾರ ಹಾಗೂ ಇನ್ನಿತರರು ಶ್ರೀಗಂಧಮರ ಕಡಿಯುವ ಪ್ರಯತ್ನದಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಆಧರಿಸಿ ನಾಗಮಂಗಲ ಉಪ ವಲಯ ಅರಣ್ಯಾಧಿಕಾರಿ ಮಂಜು ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿದ್ದಾರೆ. ಅರಣ್ಯಾಧಿಕಾರಿಗಳು ದಾಳಿ ನಡೆಸಿದ ವೇಳೆ ಬೆಚ್ಚಿಬಿದ್ದ ಆರೋಪಿಗಳು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ತಪ್ಪಿಸಿಕೊಳ್ಳದಂತೆ ಅರಣ್ಯ ಇಲಾಖೆಯವರು ಸುತ್ತುವರಿದು, ಶರಣಾಗುವಂತೆ ಆರೋಪಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಲಾಗ್ತಿದೆ.

ಗಂಧದ ಮರ ಕಡಿಯಲು ಬಂದವರ ಮೇಲೆ ಅರಣ್ಯಾಧಿಕಾರಿಗಳಿಂದ ಗುಂಡೇಟು

ಅರಣ್ಯಾಧಿಕಾರಿಗಳ ಮಾತಿಗೆ ಮಣಿಯದ ಆರೋಪಿಗಳು ತಪ್ಪಿಸಿಕೊಳ್ಳುವ ಸಲುವಾಗಿ ಅರಣ್ಯ ಇಲಾಖೆ ಗಾಡ‌ ಸಾಕಯ್ಯ ಎಂಬಾತನ ಮೇಲೆ ಗೋವಿಂದಪ್ಪ ಮಚ್ಚು ಬೀಸಿದ್ದು, ಸಾಕಯ್ಯ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಆರೋಪಿಗಳು ಓಡಿಹೋಗುತ್ತಿದ್ದಾಗ ಉಪ ವಲಯ ಅರಣ್ಯಾಧಿಕಾರಿ ಮಂಜು ಹಾರಿಸಿದ ಗುಂಡು ಗೋವಿಂದಪ್ಪನಿಗೆ ತಗುಲಿ ಅಲ್ಲಿಯೇ ಕುಸಿದುಬಿದ್ದಿದ್ದಾನೆ. ಅಪ್ಪನಿಗೆ ಗುಂಡೇಟು ಬಿದ್ದಿದ್ದರಿಂದ ಭಯಭೀತರಾಗಿ ಮಕ್ಕಳಾದ ಶಂಕರ ಮತ್ತು ಕುಮಾರ ಅಪ್ಪನ ರಕ್ಷಣೆಗೆ ಧಾವಿಸಿದ ವೇಳೆ ಅರಣ್ಯಾಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡರು.

ಇವರೊಂದಿಗೆ ಬಂದಿದ್ದ ಉಳಿದ ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಅರಣ್ಯಾಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸೆಕ್ಯುರಿಟಿಗೆ ಧಮ್ಕಿ ಹಾಕಿ ಗಂಧದ ಮರ ಕಳ್ಳತನ

Last Updated : Dec 1, 2022, 1:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.