ಮಂಡ್ಯದಲ್ಲಿ ಅಬ್ಬರಿಸಿದ ಮಳೆ: ಹಲವೆಡೆ ಅವಾಂತರ, ಜನಜೀವನ ಅಸ್ತವ್ಯಸ್ತ

author img

By

Published : Oct 17, 2021, 1:30 PM IST

Updated : Oct 17, 2021, 2:06 PM IST

heavy rain leads to problem at mandya

ಶನಿವಾರ ರಾತ್ರಿ ಮಂಡ್ಯ ಜಿಲ್ಲೆಯಲ್ಲಿ ವರುಣ ಅಬ್ಬರಿಸಿದ್ದಾನೆ. ಧಾರಾಕಾರ ಮಳೆಯಿಂದ ನಗರದ ರಸ್ತೆಗಳು ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು.

ಮಂಡ್ಯ: ನಗರದಲ್ಲಿ ಶನಿವಾರ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದು ಅವಾಂತರ ಸೃಷ್ಟಿಸಿತ್ತು. ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಗಾಳಿಯ ಅಬ್ಬರವೂ ಜೋರಾಗಿತ್ತು. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಮಂಡ್ಯದಲ್ಲಿ ಧಾರಾಕಾರ ಮಳೆ

ಶನಿವಾರ ಬೆಳಗ್ಗೆಯಿಂದ ಬಿಸಿಲಿನಿಂದ ಕೂಡಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಮೋಡ ಕವಿದಿತ್ತು. ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನಗರದ ರಸ್ತೆಗಳು ಜಲಾವೃತಗೊಂಡಿದ್ದವು. ಮಳೆ ನೀರಿನ ನಡುವೆ ವಾಹನಗಳ ಸವಾರರು ಪರದಾಡಿದರು. ಹಾಲಹಳ್ಳಿ ಬಡಾವಣೆ, ಬೀಡಿ ಕಾರ್ಮಿಕರ ಕಾಲೋನಿ, ಶಂಕರನಗರ ಸೇರಿದಂತೆ ನಗರದ ಅನೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು.

ಇದನ್ನೂ ಓದಿ: ಮದುವೆಯಾದ್ರೂ ಇನಿಯನ ತೆಕ್ಕೆಯಲ್ಲಿ ಮಹಿಳೆ: ಬೆಂಗಳೂರಲ್ಲಿ ಬಿತ್ತು ಹೆಣ.. ಠಾಣೆಗೆ ಶವ ತಂದು ಆರೋಪಿಗಳು ಶರಣು

ಅರಬ್ಬೀ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಹಲವೆಡೆ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ.

Last Updated :Oct 17, 2021, 2:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.