ಮಂಡ್ಯ: ಉಸ್ತುವಾರಿ ಸಚಿವ (ನಾರಾಯಣ ಗೌಡ) ರು ಹೇಡಿ ಎಂದು ನಿಂದಿಸಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಬಿ. ಶ್ರೀನಿವಾಸ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಎಂಬಿಎಸ್ ವಿರುದ್ಧ ದೂರು ಸಲ್ಲಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಮೈಷುಗರ್ ಉಳಿವಿಗಾಗಿ ನಡೆಯುತ್ತಿರುವ ಹೋರಾಟದ ಧರಣಿ ವೇಳೆ ಪ್ರಚಾರದ ಗೀಳಿಗೆ ಸಚಿವರ ವಿರುದ್ಧ ಏಕ ವಚನದಲ್ಲಿ ದ.ಸಂ.ಸ ರಾಜ್ಯ ಸಂಚಾಲಕ ಮಾತನಾಡುವ ಮೂಲಕ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಇದು ಅಶಾಂತಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಮುಖಂಡ ಹೊಸಳ್ಳಿ ನಾಗೇಶ್ ದೂರು ಸಲ್ಲಿಸಿರುವುದಾಗಿ ಹೇಳಿದರು.
ಇದನ್ನೂ ಓದಿ: ವಿವಾದಿತ ಹೇಳಿಕೆಗೆ ಕ್ಷಮೆ ಕೋರಿದ ಹಿಂದೂ ಮಹಾಸಭಾ ಮುಖಂಡ..
ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ. ನಾರಾಯಣ ಗೌಡ ಅವರ ಬಳಿ ಶ್ರೀನಿವಾಸ್ ತಕ್ಷಣವೇ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಎಸ್ಪಿ ಅವರಿಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ.