ETV Bharat / state

ಮಂಡ್ಯದಲ್ಲಿ ಕೊರೊನಾ ಸ್ಫೋಟ: ತಮಿಳುನಾಡಿಗೆ ಹೋಗಿದ್ದ 30ಕ್ಕೂ ಹೆಚ್ಚು ಜನರಿಗೆ ಕೋವಿಡ್​ ದೃಢ!

author img

By

Published : Jan 4, 2022, 4:10 PM IST

Updated : Jan 4, 2022, 4:40 PM IST

Corona hike in Mandya
ಕೊರೊನಾ

COVID cases in Mandya district: ತಮಿಳುನಾಡಿನ ಓಂಶಕ್ತಿ ದೇವಸ್ಥಾನಕ್ಕೆ ಹೋಗಿದ್ದ ಮಂಡ್ಯದ ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಗ್ರಾಮದ ಭಕ್ತರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಪಾಸಿಟಿವ್​​ ಬಂದವರನ್ನು ವಸತಿ ಶಾಲೆಗಳಲ್ಲಿ ಇರಿಸಿ ಕ್ವಾರಂಟೈನ್ ಮಾಡಲಾಗುತ್ತಿದೆ.

ಮಂಡ್ಯ: ಸಕ್ಕರೆ ನಾಡಿಗೆ ಮತ್ತೆ ಕೋವಿಡ್​ ಆತಂಕ ಎದುರಾಗಿದೆ. ಮಂಡ್ಯದಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ತಮಿಳುನಾಡಿಗೆ ಹೋಗಿ ಬಂದವರಲ್ಲಿ ಸೋಂಕು ಪತ್ತೆಯಾಗಿದೆ.

ತಮಿಳುನಾಡಿನ ಓಂಶಕ್ತಿಗೆ ಹೋಗಿದ್ದ ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಗ್ರಾಮದ ಭಕ್ತರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ದೇವಸ್ಥಾನಕ್ಕೆ ಹೋಗಿ ಬಂದಿರುವ 30ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ.

ಸಕ್ಕರೆ ನಾಡಿನಲ್ಲಿ ಕೊರೊನಾ ಸ್ಫೋಟ

ಶ್ರೀರಂಗಪಟ್ಟಣ ತಾಲೂಕಿನಿಂದ ಈ ದೇವಾಲಯಕ್ಕೆ ಕಳೆದ ವಾರ 6 ಬಸ್‌ಗಳಲ್ಲಿ ಭಕ್ತರು ತೆರಳಿದ್ದರು. ಈವರೆಗೆ ವಾಪಸಾದ 4 ಬಸ್‌ನಲ್ಲಿದ್ದ ಭಕ್ತರಲ್ಲಿ 30ಕ್ಕೂ ಹೆಚ್ಚು ಜನರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ.

ಇದನ್ನೂ ಓದಿ:ಮಂಡ್ಯದಲ್ಲಿ ಬೂಟ್ ಪಾಲಿಶ್ ಮಾಡುವ ಮೂಲಕ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಇಂದು ಅಥವಾ ನಾಳೆ ಮತ್ತೆರಡು ಬಸ್​ಗಳು ಶ್ರೀರಂಗಪಟ್ಟಣಕ್ಕೆ ವಾಪಸಾಗುವ ಸಾಧ್ಯತೆ ಇದೆ. ಆರೋಗ್ಯ ಸಿಬ್ಬಂದಿ ತಮಿಳುನಾಡಿನಿಂದ ವಾಪಸಾದವರ ಟೆಸ್ಟ್ ಮಾಡುತ್ತಿದ್ದು, ಪಾಸಿಟಿವ್​​ ಬಂದವರನ್ನು ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡುತ್ತಿದ್ದಾರೆ. ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೂ ಪರೀಕ್ಷೆ ಮಾಡುತ್ತಿದ್ದಾರೆ.

Last Updated :Jan 4, 2022, 4:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.