ಮಂಡ್ಯ ರೈತರಿಂದ ಪೇ ಫಾರ್ಮರ್​ ಅಭಿಯಾನ

author img

By

Published : Sep 26, 2022, 8:37 PM IST

ಮಂಡ್ಯ ರೈತರಿಂದ ಪೇ ಫಾರ್ಮರ್​ ಅಭಿಯಾನ

ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ನೂರಾರು ರೈತರು ಪೆ ಫಾರ್ಮರ್ ಪೋಸ್ಟರ್ ಬಿಡುಗಡೆಗೊಳಿಸಿದರು.

ಮಂಡ್ಯ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್​ ಪಕ್ಷದವರು ನಡೆಸುತ್ತಿರುವ ಪೇ ಸಿಎಂ ಪ್ರತಿಭಟನೆ ನಡುವೆ ಮಂಡ್ಯದ ರೈತರು ಪೇ ಫಾರ್ಮರ್ ಅಭಿಯಾನ ಆರಂಭಿಸಿದ್ದಾರೆ.

ಮಂಡ್ಯ ರೈತರಿಂದ ಪೇ ಫಾರ್ಮರ್​ ಅಭಿಯಾನ

ಮಂಡ್ಯ ರೈತರಿಂದ PAY FARMER ಅಭಿಯಾನ: ಇಂದು ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ನೂರಾರು ರೈತರು ಪೇ ಫಾರ್ಮರ್ ಪೋಸ್ಟರ್ ಬಿಡುಗಡೆಗೊಳಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೇ ಫಾರ್ಮರ್​ ಪೋಸ್ಟ್ ಹಿಡಿದು ನಿಂತ ರೈತರು ಕೆಲ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅಭಿಯಾನ ಆರಂಭಿಸಿರುವ ರೈತರು, ಕಾರು, ಹೆದ್ದಾರಿಯ ಗೋಡೆ ಹಾಗೂ ಸಾರಿಗೆ ಬಸ್ ನಿಲ್ದಾಣದ ಗೋಡೆಗಳು, ಕೆಎಸ್​ಆರ್​ಟಿಸಿ, ಐರಾವತ, ರಾಜಹಂಸ ಬಸ್​ಗಳ ತಡೆದು ಪೇ ಫಾರ್ಮರ್​ ಪೋಸ್ಟರ್​ಗಳನ್ನು ಅಂಟಿಸಿದ್ದಾರೆ.

ಪೋಸ್ಟರ್ ಅಂಟಿಸಿ ಸರ್ಕಾರದ ವಿರುದ್ದ ಆಕ್ರೋಶ: ಇದೇ ವೇಳೆ ಟನ್ ಕಬ್ಬಿಗೆ 4500 ರೂ‌. ನಿಗದಿ ಮಾಡುವಂತೆ ರೈತರು ಒತ್ತಾಯಿಸಿದ್ದಾರೆ. ಒಂದು ವೇಳೆ ಸೂಕ್ತ ಬೆಲೆ ನೀಡದಿದ್ದರೆ ದಸರಾದಲ್ಲಿ ಹೆದ್ದಾರಿ ತಡೆದು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ, ಮಧುಚಂದನ್, ಪ್ರಸನ್ನಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಓದಿ: ಪೇ - ಸಿಎಂ ಅಭಿಯಾನದ ಗಮನ ಬೇರೆಡೆ ಸೆಳೆಯುವ ಯತ್ನ ಸರ್ಕಾರ ಮಾಡುತ್ತಿದೆ: ರಾಮಲಿಂಗಾರೆಡ್ಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.