ETV Bharat / state

ಶ್ರೀರಂಗಪಟ್ಟಣದಲ್ಲಿ ಬೀದಿ ನಾಯಿ ಹಾವಳಿ.. ಗಾಯಗೊಂಡ 15ಕ್ಕೂ ಹೆಚ್ಚು ಮಂದಿ..

author img

By

Published : Oct 2, 2021, 6:37 PM IST

ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರೂ ಕ್ರಮ‌ಕೈಗೊಳ್ಳದ ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಬೀದಿ ನಾಯಿಗಳನ್ನು ಹಿಡಿಯುವಂತೆ ಒತ್ತಾಯಿಸಿದ್ದಾರೆ‌..

Street dog problem in Srirangapattana
ಶ್ರೀರಂಗಪಟ್ಟಣದಲ್ಲಿ ಬೀದಿ ನಾಯಿ ಹಾವಳಿ

ಮಂಡ್ಯ: ಶ್ರೀರಂಗಪಟ್ಟಣ ಟೌನ್ ವ್ಯಾಪ್ತಿಯ ಗಂಜಾಮ್​ನಲ್ಲಿ ಬೀದಿ ನಾಯಿಯೊಂದು ಐವರು ಬಾಲಕರು ಸೇರಿ 15ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ.

ಗಂಜಾಮ್ ರಾಮಮಂದಿರ, ಬುಸಿಗೌಡ ಸರ್ಕಲ್, ಡೈರಿಗೆ ಬಂದ ಬಾಲಕರಿಗೆ ಕಚ್ಚಿ ಎಳೆದಾಡಿದೆ. ಈ ವೇಳೆ ಬಿಡಿಸಲು ಹೋದ ಹಲವರಿಗೆ ಈ ನಾಯಿ ದಾಳಿ ನಡೆಸಿ ಕಚ್ಚಿದೆ. 15ಕ್ಕೂ ಹೆಚ್ಚು ಜನರಿಗೆ ನಾಯಿ ಕಚ್ಚಿದ ಸುದ್ದಿ ತಿಳಿದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಶ್ರೀರಂಗಪಟ್ಟಣದಲ್ಲಿ ಬೀದಿ ನಾಯಿ ಹಾವಳಿ..

ಇದನ್ನೂ ಓದಿ: ನಾಳೆ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಉಪಚುನಾವಣೆ ಉಸ್ತುವಾರಿಗಳ ನೇಮಕ : ಸಿಎಂ ಬೊಮ್ಮಾಯಿ

ಸದ್ಯ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರೂ ಕ್ರಮ‌ಕೈಗೊಳ್ಳದ ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಬೀದಿ ನಾಯಿಗಳನ್ನು ಹಿಡಿಯುವಂತೆ ಒತ್ತಾಯಿಸಿದ್ದಾರೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.