ETV Bharat / state

ಸಂಕ್ರಾಂತಿ ಕಿಚ್ಚು ಹಾಯಿಸುವ ವೇಳೆ ಬೆಂಕಿಗೆ ಬಿದ್ದ ಯುವಕ.. ಮಂಡ್ಯದಲ್ಲಿ ಅವಘಡ

author img

By

Published : Jan 16, 2022, 5:08 PM IST

Updated : Jan 16, 2022, 5:21 PM IST

ಮಂಡ್ಯ ನಗರದ ಹೊಸಹಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಕಿಚ್ಚಾಯಿಸುವ ವೇಳೆ ಯುವಕನೋರ್ವ ಬೆಂಕಿಗೆ ಬಿದ್ದು ಗಾಯಗೊಂಡಿದ್ದಾನೆ.

ಸಂಕ್ರಾಂತಿ ಕಿಚ್ಚು ಹಾಯಿಸುವ ವೇಳೆ ಬೆಂಕಿಗೆ ಬಿದ್ದ ಯುವಕ
ಸಂಕ್ರಾಂತಿ ಕಿಚ್ಚು ಹಾಯಿಸುವ ವೇಳೆ ಬೆಂಕಿಗೆ ಬಿದ್ದ ಯುವಕ

ಮಂಡ್ಯ: ಸಂಕ್ರಾಂತಿ ಸಂದರ್ಭದಲ್ಲಿ ಕಿಚ್ಚು ಹಾಯಿಸುವ ವೇಳೆ ಬೆಂಕಿಗೆ ಬಿದ್ದ ಪರಿಣಾಮ ಯುವಕನೋರ್ವ ಗಾಯಗೊಂಡಿದ್ದಾನೆ. ಮಂಡ್ಯ ನಗರದ ಹೊಸಹಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಕಿಚ್ಚಾಯಿಸುವ ವೇಳೆ ಈತ ಬೆಂಕಿಗೆ ಬಿದ್ದಿದ್ದಾನೆ. ನಿಷೇಧದ ನಡುವೆಯೂ ಹೊಸಹಳ್ಳಿಯಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗಿದೆ.

ಸಂಕ್ರಾಂತಿ ಕಿಚ್ಚು ಹಾಯಿಸುವ ವೇಳೆ ಬೆಂಕಿಗೆ ಬಿದ್ದ ಯುವಕ

ಇದನ್ನೂ ಓದಿ: ಸಂಕ್ರಾಂತಿಗೆ ಕಾಯ್ದಿದ್ದೇ ಬಂತು, ಸಂಪುಟ ಪುನಾರಚನೆ ಆಗಲಿಲ್ಲ.. ಆಕಾಂಕ್ಷಿಗಳು 5 ರಾಜ್ಯ ಚುನಾವಣೆ ಮುಗಿಯುವವರೆಗೂ ಕಾಯಲೇಬೇಕು..

ಸ್ಥಳೀಯರು ಬೆಂಕಿಯಲ್ಲಿ ಬಿದ್ದ ತಕ್ಷಣ ಯುವಕನನ್ನು ಮೇಲೆ ಎತ್ತಿ ರಕ್ಷಿಸಿದ್ದಾರೆ. ಬೆಂಕಿಗೆ ಬಿದ್ದಿದ್ದರಿಂದ ಮೈ ಹಾಗೂ ಮುಖದ ಭಾಗಕ್ಕೆ ಸುಟ್ಟಿರುವ ಗಾಯಗಳಾಗಿವೆ. ಮಿಮ್ಸ್ ಆಸ್ಪತ್ರೆಯಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Last Updated :Jan 16, 2022, 5:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.