ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ ವ್ಯಕ್ತಿ ನೀರುಪಾಲು

author img

By

Published : Oct 11, 2021, 9:45 AM IST

Death

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೆರೆಗೆ ಹಾರಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಹದಿನಾರು ಗ್ರಾಮದಲ್ಲಿ ನಡೆದಿದೆ.

ಮೈಸೂರು: ಜೂಜು ಅಡ್ಡೆ ಮೇಲೆ ದಾಳಿ ಮಾಡಿದಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ನೀರಿಗೆ ಜಿಗಿದ ವ್ಯಕ್ತಿ ಸಾವನ್ನಪ್ಪಿದ್ದಾನೆ.

ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ನಂಜುಂಡ (37) ಮೃತ ವ್ಯಕ್ತಿ. 5 ರಿಂದ 6 ಜನ ಭಾನುವಾರ ಸಂಜೆ 6 ಗಂಟೆಗೆ ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಹದಿನಾರು ಕೆರೆಗೆ ಜಿಗಿದಿದ್ದ ನಂಜುಂಡ, ಈಜು ಬಾರದೆ ನೀರು ಪಾಲಾಗಿದ್ದಾನೆ.

ನಿನ್ನೆ ಸಂಜೆಯಿಂದಲೂ ನಂಜನಗೂಡು ಗ್ರಾಮಾಂತರ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ಆರಂಭಿಸಿದ್ದರು. ಇಂದು ಬೆಳಗ್ಗೆ ನಂಜುಂಡನ ಮೃತದೇಹ ಪತ್ತೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.