ETV Bharat / state

ನಂಜುಂಡೇಶ್ವರನ ಜಾತ್ರೆಗೆ ಅವಕಾಶ ನೀಡುವಂತೆ ಸಚಿವರಿಗೆ ಭಕ್ತರಿಂದ ಮನವಿ

author img

By

Published : Mar 19, 2021, 3:05 PM IST

ಮೈಸೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಬೆಂಗಳೂರು ಜಲ ಮಂಡಳಿ ಮಾದರಿ ಪ್ರತ್ಯೇಕ ಮಂಡಳಿ ಅಥವಾ ಬೇರೆ ರೀತಿಯ ಕೇಂದ್ರೀಕೃತ ನಿಯಂತ್ರಣ ವ್ಯವಸ್ಥೆ ಬಗ್ಗೆ ಬರುವ ಪ್ರಸ್ತಾವನೆಯನ್ನು ಸರ್ಕಾರದ ಹಂತದಲ್ಲಿ ಚರ್ಚಿಸಿ, ಸೂಕ್ತ ನಿರ್ಧಾರ ಮಾಡಲಾಗುವುದು..

Devotees appeal to ministers to allow Nanjundeshwar's temple festival
ನಂಜುಂಡೇಶ್ವರನ ಜಾತ್ರೆಗೆ ಅವಕಾಶ ನೀಡುವಂತೆ ಸಚಿವರಿಗೆ ಭಕ್ತರಿಂದ ಮನವಿ

ಮೈಸೂರು : ನಂಜನಗೂಡು ನಂಜುಂಡೇಶ್ವರನ ಪಂಚ ಮಹಾರಥೋತ್ಸವಕ್ಕೆ ಅವಕಾಶ ನೀಡುವಂತೆ ಭಕ್ತಾದಿಗಳು, ಜಿಲ್ಲಾ ಉಸ್ತುವಾರಿ ಸಚಿವ ಎಸ್‌ ಟಿ ಸೋಮಶೇಖರ್ ಅವರಿಗೆ ಮನವಿ ಮಾಡಿದ್ದಾರೆ. ಜಿಪಂ ಸಭಾಂಗಣದ ಬಳಿ ಆಗಮಿಸಿದ ಭಕ್ತಾದಿಗಳು, ಕಳೆದ ವರ್ಷವೂ ಜಾತ್ರೆ ನಡೆದಿಲ್ಲ. ಈ ಬಾರಿ ಜಾತ್ರೆ ನಡೆಸಲು ಅವಕಾಶ ನೀಡುವಂತೆ ಮನವಿ ಸಲ್ಲಿಸಿದರು.

ಈಗಾಗಲೇ ಈ ಬಾರಿ ಜಾತ್ರೆಗಾಗಿ ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿದೆ. ರಥೋತ್ಸವ ರದ್ದು ಆದೇಶ ನೋವುಂಟು ಮಾಡಿದೆ. ಧಾರ್ಮಿಕ ಕಾರ್ಯಗಳು ನಡೆಯದಿದ್ದಲ್ಲಿ ತಾಲೂಕಿಗೆ ಕೆಡುಕಾಗುವ ಆತಂಕವಿದೆ. ಇಡೀ ದೇಶಕ್ಕೆ ಕೆಡುಕಾಗಲಿದೆ ಎಂದು ಮನವಿ ಮಾಡಿದರು.

ಕೋವಿಡ್ ನಿಯಮ ಪಾಲಿಸಿ ನಂಜುಂಡೇಶ್ವರನ ಜಾತ್ರೆ ಆಚರಿಸಲು ಅನುಮತಿ ನೀಡಿ, ಕೊರೊನಾ ಬಗ್ಗೆ ನಮಗೂ ಅರಿವಿದೆ. ಕೊರೊನಾ ಮುನ್ನೆಚ್ಚರಿಕಾ ಕ್ರಮವಹಿಸಿ ಜಾತ್ರೆ ನಡೆಸುತ್ತೇವೆ ಎಂದು ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿದ ನಂತರ ಸಚಿವ ಎಸ್ ಟಿ ಸೋಮಶೇಖರ್ ಮಾತನಾಡಿ, ಆರೋಗ್ಯ ಸಚಿವರೊಟ್ಟಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು. ಬಳಿಕ ಕೊರೊನಾ ಕುರಿತು ಪ್ರತಿಕ್ರಿಯಿಸಿದ ಅವರು, ಜಿಲ್ಲೆಯಲ್ಲಿ ಈಗ 269 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈ ಸಂಖ್ಯೆ ಜಾಸ್ತಿಯಾಗದಂತೆ ಎಲ್ಲರೂ ಎಚ್ಚರ ವಹಿಸೋಣ ಎಂದರು.

ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಂಡಿದೆ. ಪೊಲೀಸ್ ಆಯುಕ್ತರು, ಪೊಲೀಸ್ ಅಧೀಕ್ಷರು, ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಸಿಇಒ ಮುಂತಾದ ಅಧಿಕಾರಿಗಳು ಇನ್ನೂ ಸ್ವಲ್ಪ ದಿನ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮೈಸೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಬೆಂಗಳೂರು ಜಲ ಮಂಡಳಿ ಮಾದರಿ ಪ್ರತ್ಯೇಕ ಮಂಡಳಿ ಅಥವಾ ಬೇರೆ ರೀತಿಯ ಕೇಂದ್ರೀಕೃತ ನಿಯಂತ್ರಣ ವ್ಯವಸ್ಥೆ ಬಗ್ಗೆ ಬರುವ ಪ್ರಸ್ತಾವನೆಯನ್ನು ಸರ್ಕಾರದ ಹಂತದಲ್ಲಿ ಚರ್ಚಿಸಿ, ಸೂಕ್ತ ನಿರ್ಧಾರ ಮಾಡಲಾಗುವುದು ಎಂದರು.

ಕುಡಿಯುವ ನೀರಿನ ಕೊರತೆ ಆಗಬಾರದು : ಬೇಸಿಗೆ ಆರಂಭವಾಗಿರುವ ಹಿನ್ನೆಲೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೂರದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ಹೆಚ್‌ ಡಿ ಕೋಟೆಯಲ್ಲಿ 10 ಗ್ರಾಮಗಳು, ಹುಣಸೂರು ತಾಲೂಕಿನಲ್ಲಿ 14, ಮೈಸೂರಿನಲ್ಲಿ 16, ನಂಜನಗೂಡಿನಲ್ಲಿ 35, ಪಿರಿಯಾಪಟ್ಟಣ 10, ತಿ.ನರಸೀಪುರ 18 ಹಳ್ಳಿಗಳಲ್ಲಿ ಸಮಸ್ಯೆ ಕಂಡು ಬಂದಿದೆ. ಕೆಆರ್‌ನಗರದಲ್ಲಿ ಸಮಸ್ಯೆ ಕಂಡು ಬಂದಿಲ್ಲ.

ಜಿಲ್ಲೆಯಲ್ಲಿ 2-3 ಗ್ರಾಮಗಳಿಗೆ ಮಾತ್ರ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತದೆ. ಉಳಿದ ಗ್ರಾಮಗಳಿಗೆ ಶಾಶ್ವತ ಪರಿಹಾರಕ್ಕೆ ಕ್ರಮವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ: ಮೈಸೂರು ಬಳಿ ಕೇರಳ ಚಿನ್ನದ ವ್ಯಾಪಾರಿಯಿಂದ ಕೋಟಿ ರೂಪಾಯಿ ದರೋಡೆ ಮಾಡಿ ಎಸ್ಕೇಪ್​ ಆದ ಕಳ್ಳರು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.