ETV Bharat / state

ಹೆಚ್.ವಿಶ್ವನಾಥ್ ಬಗ್ಗೆ ನಾನು ಮಾತನಾಡುವುದಿಲ್ಲ: ಸಿದ್ದರಾಮಯ್ಯ

author img

By

Published : Nov 15, 2019, 1:28 PM IST

ನರೇಂದ್ರ ಮೋದಿ ಬಗ್ಗೆ ಅನರ್ಹ ಶಾಸಕ ಹೆಚ್​. ವಿಶ್ವನಾಥ್​ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

ಸಿದ್ದರಾಮಯ್ಯ ಸಿದ್ದರಾಮಯ್ಯ

ಮೈಸೂರು: ಹೆಚ್.ವಿಶ್ವನಾಥ್ ಹೇಳಿಕೆ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿ ಕನಕ ಜಯಂತಿ ಮೆರವಣಿಗೆಗೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಹೆಚ್.ವಿಶ್ವನಾಥ್ ಅವರು ದಿವಂಗತ ದೇವರಾಜ ಅರಸು ಅವರು ನೀಡಿದ ಆಡಳಿತದಂತೆ ನರೇಂದ್ರ ಮೋದಿ ಆಡಳಿತ ನೀಡುತ್ತಿದ್ದಾರೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಸಿದ್ದರಾಮಯ್ಯ ಹೇಳಿಕೆ

ಇನ್ನು ರಾಜ್ಯದ 15 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ನಾವು ತಯಾರಾಗುತ್ತೀದ್ದೇವೆ. ಗೆಲ್ಲುವ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.

ಕನಕದಾಸರು ಜಾತಿಯ ವಿರುದ್ಧ ಹೋರಾಟ ಮಾಡಿ, ಸಮಾಜದಲ್ಲಿ ಸಮಾನತೆ ಸಾರಿದವರು. ಅವರ ಹೋರಾಟ ಸಮಾಜ ಸ್ಫೂರ್ತಿಯಾಗಲಿದೆ ಎಂದರು.

ಇನ್ನು ಅರಮನೆ ಮುಂಭಾಗದಿಂದ ಸಾಗಿದ ಕನಕ ಜಯಂತ್ಯೋತ್ಸವದ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗಿಯಾಗಿ ಮೆರವಣಿಗೆಗೆ ರಂಗು ತುಂಬಿದವು

Intro:ಸಿದ್ದರಾಮಯ್ಯ ಬೈಟ್ ಕನಕಜಯಂತಿ


Body:ಕನಕಜಯಂತಿ


Conclusion:ಎಚ್.ವಿಶ್ವನಾಥ್ ಬಗ್ಗೆ ನಾನು ಮಾತನಾಡುವುದಿಲ್ಲ: ಸಿದ್ದರಾಮಯ್ಯ
ಮೈಸೂರು: ಎಚ್.ವಿಶ್ವನಾಥ್ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಮೈಸೂರಿನ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿ ಕನಕಜಯಂತಿ ಮೆರವಣಿಗೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್.ವಿಶ್ವನಾಥ್ ಅವರು ದಿವಂಗತ ದೇವರಾಜ ಅರಸು ಅವರು ನೀಡಿದ ಆಡಳಿತದಂತೆ ನರೇಂದ್ರ ಮೋದಿ ಆಡಳಿತ ನೀಡುತ್ತಿದ್ದಾರೆ ಎಂದು ಹೇಳಿರುವ ಎಚ್‌.ವಿಶ್ವನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸಿದ್ದರಾಮಯ್ಯ ನಿರಾಕರಿಸಿದರು.
ರಾಜ್ಯದ 15 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ನಾವು ತಯಾರಾಗುತ್ತೀದ್ದಿವಿ. ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.
ಕನಕದಾಸರು ಜಾತಿಯ ವಿರುದ್ಧ ಹೋರಾಟ ಮಾಡಿ,ಸಮಾಜದಲ್ಲಿ ಸಮಾನತೆ ಸಾರಿದವರು.ಅವರ ಹೋರಾಟ ಸಮಾಜಕ್ಕೆ ಸ್ಫೂರ್ತಿಯಾಗಲಿದೆ ಎಂದರು.
ಅರಮನೆ ಮುಂಭಾಗದಿಂದ ಕನಕಜಯಂತ್ಯೋತ್ಸವ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಸಾಗಿದವು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.