ETV Bharat / state

ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಸೋಮಣ್ಣ ಭೇಟಿ: ಸಂತ್ರಸ್ತರಿಂದ ಅಹವಾಲು ಸ್ವೀಕಾರ

author img

By

Published : Sep 7, 2019, 11:00 PM IST

ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಸೋಮಣ್ಣ ಭೇಟಿ

ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ನೆರೆ ಪ್ರದೇಶ, ರಸ್ತೆ, ಮುರಿದು ಬಿದ್ದ ಸೇತುವೆಗಳನ್ನು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಪರಿಶೀಲನೆ ನಡೆಸಿದ್ರು.

ಕಬಿನಿ ಜಲಾಶಯದ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ದಾರಿ ಮಧ್ಯದ ಗ್ರಾಮಗಳ ಜನರಿಂದ ಅಹವಾಲು ಸ್ವೀಕರಿಸಿದರು. ಹಾದನೂರು ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್, ಎಸ್​​ಸಿ ಮತ್ತು ಎಸ್​​​ಟಿ ಸಮುದಾಯಗಳಿಗೆ ಮನೆ ಮಂಜೂರಾತಿ ಮಾಡಿಕೊಡುವಂತೆ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರ ಪಡೆದು ಸಚಿವರು ಮಂಜೂರಾತಿಯ ಭರವಸೆ ನೀಡಿದರು.

somanna
ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಸೋಮಣ್ಣ ಭೇಟಿ

ಹೆಡಿಯಾಲ-ಬಡಗಲಪುರ ರಸ್ತೆಯ ಮಧ್ಯೆ ಸುಮಾರು ವರ್ಷಗಳ ಹಿಂದೆ ನಿರ್ಮಿಸಿದ್ದ ಬಂಡಿ ಸೇತುವೆ ಶಿಥಿಲಾವಸ್ಥೆಯಲ್ಲಿದೆ. ನುಗು ಜಲಾಶಯ ತುಂಬಿದ ಪರಿಣಾಮ ಸೇತುವೆ ಮುಳುಗಡೆಯಾಗಿ ಹಾನಿಯಾಗಿರುವುದನ್ನ ಪರಿಶೀಲಿಸಿದ ಸಚಿವರು, ಅದನ್ನು ಕೆಡವಿ ಶಾಶ್ವತ ಸೇತುವೆ ನಿರ್ಮಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿಶೋರ್ ಚಂದ್ರ ಅವರಿಗೆ ತಿಳಿಸಿದರು. ಸೇತುವೆ ಮರು ನಿರ್ಮಾಣಕ್ಕೆ 4 ಕೋಟಿ ಮನವಿ ಹಾಗೂ ದುರಸ್ತಿಗೆ 10 ಲಕ್ಷ ರೂ.ಗಳ ಮನವಿಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ತಿಳಿಸಿದರು. ಹೆಚ್.ಡಿ.ಕೋಟೆ ಅಂಕನಾಥಪುರದ ಸೇತುವೆ ಕುಸಿದಿದ್ದು, ಸಂಚಾರ ಸಂಪೂರ್ಣವಾಗಿ ಕಡಿತಗೊಂಡಿದೆ. ಅದನ್ನು ಪರಿಶೀಲಿಸಿದ ಸಚಿವರು, ಸೇತುವೆ ಮತ್ತು ಅಂಕನಾಥಪುರ ರಸ್ತೆಯ ಕಾಮಗಾರಿಯನ್ನು ಶೀಘ್ರ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Intro:ಸೋಮಣ್ಣBody:ಎಚ್.ಡಿ.ಕೋಟೆ ತಾಲ್ಲೂಕಿನ ನೆರೆ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದ ಸಚಿವ ಸೋಮಣ್ಣ
ಮೈಸೂರು: ಹೆಚ್.ಡಿ.ಕೋಟೆ ತಾಲ್ಲೂಕಿನ ಪ್ರವಾಹದ ನೆರೆ ಪ್ರದೇಶ, ರಸ್ತೆ, ಸೇತುವೆಗಳನ್ನು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಪರಿಶೀಲಿಸಿದರು.

ಕಬಿನಿ ಜಲಾಶಯದ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ದಾರಿ ಮಧ್ಯದ ಗ್ರಾಮಗಳ ಜನರಿಂದ ಅಹವಾಲು ಸ್ವೀಕರಿಸಿದರು. ಹಾದನೂರು ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಅವರು ಎಸ್.ಸಿ ಮತ್ತು ಎಸ್.ಟಿ ಸಮುದಾಯಗಳಿಗೆ ಮನೆ ಮಂಜೂರಾತಿ ಮಾಡಿಕೊಡುವಂತೆ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರಪಡೆದು ಸಚಿವರು ಮಂಜೂರಾತಿಯ ಭರವಸೆ ನೀಡಿದರು.

ಹೆಡಿಯಾಲ-ಬಡಗಲಪುರ ರಸ್ತೆಯ ಮಧ್ಯ ಸುಮಾರು ವರ್ಷಗಳ ಹಿಂದೆ ನಿರ್ಮಿಸಿದ್ದ ಬಂಡಿ ಸೇತುವೆಯು ಶೀತಿಲಾವಸ್ಥೆಯಲ್ಲಿದ್ದು, ನುಗು ಜಲಾಶಯ ತುಂಬಿದ ಪರಿಣಾಮ ಸೇತುವೆ ಮುಳುಗಡೆಯಾಗಿ ಹಾನಿಯಾಗಿರುವದನ್ನು ಪರಿಶೀಲಿಸಿದ ಸಚಿವರು ಅದನ್ನು ಕೆಡುವಿ ಶಾಶ್ವತವಾದ ನೂತನ ಸೇತುವೆ ನಿರ್ಮಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಕಿಶೋರ್ ಚಂದ್ರರವರಿಗೆ ತಿಳಿಸಿದರು.
ಸೇತುವೆ ಮರು ನಿರ್ಮಾಣಕ್ಕೆ ೪ ಕೋಟಿಯ ಮನವಿಯನ್ನು ಹಾಗೂ ದುರಸ್ತಿಗೆ ೧೦ ಲಕ್ಷ.ರೂಗಳ ಮನವಿಯನ್ನು ಈಗಾಗಲೇ ಸರ್ಕಾರಕ್ಕೆ
ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ತಿಳಿಸಿದರು.

ಹೆಚ್.ಡಿ.ಕೋಟೆ ಅಂಕನಾಥಪುರದ ಸೇತುವೆ ಕುಸಿದಿದ್ದು ಸಂಚಾರ ಸಂಪೂರ್ಣವಾಗಿ ಕಡಿತಗೊಂಡಿದ್ದು,ಅದನ್ನು ಪರಿಶೀಲಿಸಿದ ಸಚಿವರು ಸೇತುವೆ ಮತ್ತು ಅಂಕನಾಥಪುರ ರಸ್ತೆಯ ಕಾಮಗಾರಿಯನ್ನು ಶೀಘ್ರವಾಗಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಶೀಲನೆಯ ಸಂದರ್ಭದಲ್ಲಿ ಶಾಸಕರಾದ ಅನಿಲ್ ಚಿಕ್ಕಮಾದು, ನಿರಂಜನ್ ಕುಮಾರ್ , ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪರಿಮಳ ಶ್ಯಾಂ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಹಾಜರಿದ್ದರು.Conclusion:ಸೋಮಣ್ಣ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.