ವಿಡಿಯೋ ನೋಡಿ : ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆ ಬರ್ಬರ ಹತ್ಯೆ

author img

By

Published : Jan 15, 2022, 1:13 PM IST

ಮೈಸೂರು ಮಹಿಳೆ ಕೊಲೆ ವಿಡಿಯೋ

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನು, ಗೋವಿಂದನಾಯಕ, ಕಿರಣ್, ಲಕ್ಷ್ಮಿ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಪರಾರಿಯಾಗಿರುವ ಮನೋಜ್ ಬಂಧನಕ್ಕೆ ವಿಜಯನಗರ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ..

ಮೈಸೂರು : ನಗರದ ಹಿನಕಲ್ ನಾಯಕರ ಬೀದಿಯಲ್ಲಿ ಆಸ್ತಿ ವಿಚಾರಕ್ಕಾಗಿ ಸಂಬಂಧಿಕರ ನಡುವೆ ಗಲಾಟೆ ನಡೆದು ಮಹಿಳೆಯ ಕತ್ತಿಗೆ ಚಾಕು ಇರಿಯಲಾಗಿತ್ತು. ಈ ದೃಶ್ಯವನ್ನ ಸ್ಥಳೀಯರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ.

ದಾಸನಾಯಕ ಹಾಗೂ ಗೋವಿಂದನಾಯಕ ಎಂಬುವರ ನಡುವೆ ಆಸ್ತಿ ವಿಚಾರವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು. ಶುಕ್ರವಾರ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆ ತಾರಕಕ್ಕೇರಿತ್ತು.

ಈ ವೇಳೆ ದಾಸನಾಯಕನ‌ ಪತ್ನಿ ಸಾಕಮ್ಮಳನ್ನು ತಳ್ಳಾಡಿ‌ ಕತ್ತಿಗೆ ಚಾಕು ಇರಿಯಲಾಗಿತ್ತು. ಘಟನೆಯ ದೃಶ್ಯವನ್ನು ಸ್ಥಳೀಯರು ತಮ್ಮ ಮನೆ ಮೇಲೆ ನಿಂತು ವಿಡಿಯೋ ಮಾಡಿದ್ದಾರೆ‌.

ಮೈಸೂರು ಮಹಿಳೆ ಕೊಲೆ ವಿಡಿಯೋ

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನು, ಗೋವಿಂದನಾಯಕ, ಕಿರಣ್, ಲಕ್ಷ್ಮಿ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಪರಾರಿಯಾಗಿರುವ ಮನೋಜ್ ಬಂಧನಕ್ಕೆ ವಿಜಯನಗರ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ.

ಓದಿ: ಮೈಸೂರು: ಆಸ್ತಿ ವಿಚಾರಕ್ಕೆ ಗಲಾಟೆ, ಮಹಿಳೆಯ ಬರ್ಬರ ಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.