ಪಿಎಫ್ಐ, ಕಾಂಗ್ರೆಸ್​ ನಡುವೆ ಯಾವುದೇ ವ್ಯತ್ಯಾಸವಿಲ್ಲ: ಸಚಿವ ನಾಗೇಶ್ ವಾಗ್ದಾಳಿ

author img

By

Published : Sep 30, 2022, 7:56 AM IST

Updated : Sep 30, 2022, 8:03 AM IST

bc nagesh

ಆರ್​ಎಸ್​ಎಸ್ ದೇಶ ಭಕ್ತ ಸಂಘಟನೆ. ಆದರೆ ಪಿಎಫ್ಐ ದೇಶ ವಿರೋಧಿ ಕೆಲಸಗಳಲ್ಲಿ ಭಾಗಿಯಾಗಿದೆ. ಅದಕ್ಕೆ ಪೂರಕವಾಗಿ ಸಾಕ್ಷಿ ಸಿಕ್ಕಿರುವುದರಿಂದ ಪಿಎಫ್ಐ ನಿಷೇಧ ಮಾಡಲಾಗಿದೆ. ಪಿಎಫ್ಐ ಹಾಗೂ ಕಾಂಗ್ರೆಸ್​ ಇಬ್ಬರ ಚಿಂತನೆಗಳು ಒಂದೇ ರೀತಿಯಾಗಿವೆ ಎಂದು ಸಚಿವ ಬಿ.ಸಿ ನಾಗೇಶ್ ಕಿಡಿಕಾರಿದರು.

ಮೈಸೂರು: ಪಿಎಫ್ಐ ಹಾಗೂ ಕಾಂಗ್ರೆಸ್​ಗೆ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರ ಚಿಂತನೆಗಳು ಒಂದೇ ರೀತಿಯಾಗಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕಿಡಿಕಾರಿದರು.

ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್​ನವರಿಗೆ ಏನು ಗೊತ್ತಿದೆ ಎಂದು ಈ ರೀತಿ ಹೇಳುತ್ತಿದ್ದಾರೋ ಗೊತ್ತಿಲ್ಲ. ಅವರಿಗೆ ಕೇವಲ ಮುಸ್ಲಿಂರ ಮತ ಬೇಕಿದೆ. ಹಾಗಾಗಿ, ಹೀಗೆ ಮಾತನಾಡುತ್ತಿದ್ದಾರೆ ಎಂದು ಆರ್​ಎಸ್​ಎಸ್ ಬ್ಯಾನ್ ಮಾಡಬೇಕೆಂಬ ಕೈ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಬಳಿ ಆರ್​​ಎಸ್​ಎಸ್ ವಿರುದ್ಧ ಸಾಕ್ಷ್ಯಗಳಿದ್ದರೆ ಸರ್ಕಾರಕ್ಕೆ ನೀಡಲಿ: ಭೋಜೇಗೌಡ

ಆರ್​ಎಸ್​ಎಸ್ ದೇಶ ಭಕ್ತ ಸಂಘಟನೆ. ಆದರೆ, ಸರ್ಕಾರದಿಂದ ಯಾವುದೇ ಅನುದಾನ ಪಡೆಯುತ್ತಿಲ್ಲ. ಇಲ್ಲಿ ರಿಜಿಸ್ಟರ್ ಆಗಿದೆಯೋ ಇಲ್ಲವೋ ಅನ್ನೋದು ಮುಖ್ಯವಲ್ಲ. ದೇಶದ ಹಿತಕ್ಕಾಗಿ ಆರ್‌ಎಸ್ಎಸ್ ಕೆಲಸ ಮಾಡುತ್ತಿದೆ. ಆದರೆ ಪಿಎಫ್ಐ ದೇಶ ವಿರೋಧಿ ಕೆಲಸಗಳಲ್ಲಿ ಭಾಗಿಯಾಗಿದೆ. ಅದಕ್ಕೆ ಪೂರಕವಾಗಿ ಸಾಕ್ಷಿ ಸಿಕ್ಕಿರುವುದರಿಂದ ಪಿಎಫ್​​ಐ ಬ್ಯಾನ್ ಮಾಡಲಾಗಿದೆ. ಇಲ್ಲಿಯವರೆಗೆ ಪ್ರಧಾನಿ ಮೋದಿ, ಗೃಹ ಮಂತ್ರಿ ಅಮಿತ್ ಶಾ ಅವರು ತೆಗೆದುಕೊಂಡ ನಿರ್ಧಾರಗಳು ಸರಿಯಾಗಿವೆ ಎಂದು ಸಮರ್ಥಿಸಿಕೊಂಡರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿ ಸಿ ನಾಗೇಶ್

ಇದನ್ನೂ ಓದಿ: ಬೆಂಗಳೂರು, ಬೆಳಗಾವಿಯಲ್ಲಿ ಪಿಎಫ್​ಐ ಕಚೇರಿಗಳು ಬಂದ್​: ಸೀಲ್, ಬೀಗಮುದ್ರೆ ಒತ್ತಿದ ಪೊಲೀಸರು

ಶಿಕ್ಷಕರ ನೇಮಕಾತಿ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ನಾಗೇಶ್, ಕುಂಬಳಕಾಯಿ ಕಳ್ಳ ಅಂದರೆ ಇವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಶಿಕ್ಷಕರ ನೇಮಕಾತಿ ಹಗರಣ ಕುರಿತು ಸಿಐಡಿಯವರು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದ ಎಲ್ಲವೂ ಗೊತ್ತಾಗುತ್ತದೆ. ಯಾರ ಕಾಲದಲ್ಲಿ ಏನೇನು ನಡೆದಿದೆ ಎನ್ನುವುದು ತಿಳಿಯಲಿದೆ. ಆಗ ಅಕ್ರಮ ಯಾರ ಕಾಲದ್ದು ಎಂದು ನಾನೇ ಅವರನ್ನು ಪ್ರಶ್ನೆ ಮಾಡುತ್ತೇನೆ ಎಂದರು.

Last Updated :Sep 30, 2022, 8:03 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.