ETV Bharat / state

Sanatana Dharma: ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

author img

By ETV Bharat Karnataka Team

Published : Sep 4, 2023, 9:58 AM IST

Sanatana Dharma statement: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ ಸನಾತನ ಧರ್ಮದ ಹೇಳಿಕೆಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಖಂಡನೆ ವ್ಯಕ್ತಪಡಿಸಿದ್ದಾರೆ.

Pejavara Vishwesha Tirtha shree
ಸನಾತನ ಧರ್ಮ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಪೇಜಾವರ ಶ್ರೀ

ಸನಾತನ ಧರ್ಮ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಪೇಜಾವರ ಶ್ರೀ

ಮೈಸೂರು : ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ ಇದ್ದಂತೆ. ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು ಎಂದಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್​ ಅವರ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೀವ್ರವಾಗಿ ಖಂಡಿಸಿದ್ದಾರೆ.

ನಗರದಲ್ಲಿ ಚಾತುರ್ಮಾಸ ವ್ರತದಲ್ಲಿರುವ ಶ್ರೀಗಳು ಈ ಕುರಿತು ಹೇಳಿಕೆ ನೀಡಿದ್ದು, "ಒಂದು ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜ ಬಿತ್ತುವುದು ಸರಿಯಲ್ಲ" ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಸನಾತನ' ಎಂದರೆ ಸದಾಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು ಎಂದು ಸನಾತನ ಧರ್ಮ ತಿಳಿಸುತ್ತದೆ. ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ, ಅದನ್ನು ಖಂಡಿಸುತ್ತೇವೆ ಎಂದು ಶ್ರೀಗಳು ಹೇಳಿದ್ದಾರೆ.

ಏನಿದು ಹೇಳಿಕೆ? : ತಮಿಳುನಾಡು ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಸಚಿವ ಉದಯನಿಧಿ ಸ್ಟಾಲಿನ್‌ ಅವರು, ‘ಸನಾತನಂ ಎಂದರೇನು?, ಈ ಪದ ಸಂಸ್ಕೃತದ್ದು. ಸಮಾನತೆ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದದ್ದು. ಇದು ಕೊರೊನಾ, ಡೆಂಗ್ಯೂ, ಮಲೇರಿಯಾಕ್ಕೆ ಸಮಾನವಾದದ್ದು. ಆದ್ದರಿಂದ ಇಂಥದ್ದನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ : ಸನಾತನ ಧರ್ಮ ಕುರಿತು ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ.. ದೇಶದ ಜನತೆಯ ಕ್ಷಮೆಯಾಚಿಸುವಂತೆ ಅಶ್ವತ್ಥ್​ ನಾರಾಯಣ್ ಆಗ್ರಹ

ಅಷ್ಟೇ ಅಲ್ಲದೆ, ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ಯುವ ಸಚಿವ, "ಸನಾತನ ಧರ್ಮ ಕೊರೊನಾ ವೈರಸ್, ಮಲೇರಿಯಾ ಮತ್ತು ಡೆಂಗ್ಯೂ ವೈರಸ್ ಮತ್ತು ಸೊಳ್ಳೆಗಳಿಂದ ಉಂಟಾಗುವ ಜ್ವರವಿದ್ದಂತೆ. ಇಂಥದ್ದನ್ನು ಬೇರು ಸಮೇತ ಕಿತ್ತು ಹಾಕಬೇಕು. ಸನಾತನ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುತ್ತದೆ. ಇದರ ನಿರ್ಮೂಲನೆ ಮಾಡುವ ಮೂಲಕ ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿಕೆ ನೀಡಿದ್ದೆ. ಆದರೆ, ಜನರ ಮಾರಣಹೋಮಕ್ಕೆ ಕರೆ ನೀಡಿಲ್ಲ. ಈ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ" ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : Sanatana Dharma : ಇಂಡಿಯಾ ಮೈತ್ರಿಕೂಟದಿಂದ ಸನಾತನ ಧರ್ಮಕ್ಕೆ ಅವಮಾನ; ಗೃಹ ಸಚಿವ ಅಮಿತ್​ ಶಾ

ಇನ್ನೊಂದೆಡೆ, ಈ ಹೇಳಿಕೆಯನ್ನೇ ಪ್ರಬಲ ಅಸ್ತ್ರವಾಗಿ ಮಾಡಿಕೊಂಡಿರುವ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಗೃಹ ಸಚಿವ ಅಮಿತ್​ ಶಾ ಅವರು, ವಿಪಕ್ಷಗಳ ಮೈತ್ರಿಕೂಟ ಸನಾತನ ಧರ್ಮವನ್ನು ಅವಮಾನಿಸುತ್ತಿದೆ. ಕೇವಲ ವೋಟಿಗಾಗಿ ಪವಿತ್ರ ಧರ್ಮವನ್ನೇ ಕೊನೆಗಾಣಿಸುವ ಮಾತನ್ನಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : Sanatana Dharma: 'ಸನಾತನ ಧರ್ಮ' ಹೇಳಿಕೆಗೆ ನಾನು ಬದ್ಧ, ಯಾವುದೇ ಸವಾಲು ಎದುರಿಸುವೆ: ಉದಯನಿಧಿ ಸ್ಟಾಲಿನ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.