ETV Bharat / state

ಪೇಪರ್​ ಕಾರ್ಖಾನೆಗೆ ಹುಸಿ ಬಾಂಬ್​ ಕರೆ: ಆರೋಪಿ ಅರೆಸ್ಟ್‌

author img

By

Published : Mar 1, 2020, 12:23 PM IST

pseudo-bomb call Accused arrest in Mysuru
ಹುಸಿ ಬಾಂಬ್​ ಕರೆ ಮಾಡಿದಾತ ಅಂದರ್​

ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಶ್ರೀ ರಾಮ ಪೇಪರ್ ಕಾರ್ಖಾನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಅನಾಮಧೇಯ ಕರೆಯೊಂದು ಬಂದಿತ್ತು. ಈ ಹಿನ್ನೆಲೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದರು.

ಮೈಸೂರು: ನಂಜನಗೂಡಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಪೇಪರ್ ಕಾರ್ಖಾನೆಗೆ ಹುಸಿ ಬಾಂಬ್​ ಕರೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಶ್ರೀ ರಾಮ ಪೇಪರ್ ಕಾರ್ಖಾನೆಗೆ ಬಾಂಬ್ ಇಡಲಾಗಿದೆ ಎಂದು ಅನಾಮಧೇಯ ಕರೆಯೊಂದು ಬಂದಿತ್ತು. ಈ ಹಿನ್ನೆಲೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದರು. ಪರಿಶೀಲನೆ ವೇಳೆ ಅದೊಂದು ಹುಸಿ ಬಾಂಬ್​ ಕರೆ ಎಂದು ತಿಳಿದು ಬಂದಿದೆ. ಹೀಗಾಗಿ ಹುಸಿ ಬಾಂಬ್​ ಕರೆ ಆಧಾರಿಸಿ ತನಿಖೆ ನಡೆಸಿದ ಸಿಸಿಬಿ ಮತ್ತು ನಂಜನಗೂಡಿನ ಪೊಲೀಸರು, ಕರೆ ಮಾಡಿದ್ದ ಆರೋಪಿ ಶಿಭೂ ಡಿ ಮ್ಯಾಥ್ಯೂ (35) ಎಂಬಾತನನ್ನು ಬಂಧಿಸಿದ್ದಾರೆ.

ನಂಜನಗೂಡು ಪೊಲೀಸ್​ ಠಾಣೆ

ಈತ ಈ ಹಿಂದೆ ಇದೇ ಪೇಪರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಕೆಲಸದ ವೇಳೆ ಗಲಾಟೆ ಮಾಡಿದ್ದಕ್ಕಾಗಿ ಮೂರು ತಿಂಗಳ ಹಿಂದೆ ಈತನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತಂತೆ. ಈ ದ್ವೇಷದಿಂದ ಕಾರ್ಖಾನೆಗೆ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ. ನಂಜನಗೂಡು ಗ್ರಾಮಾಂತರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.