ಮೈಸೂರು: ಶಾಸಕರನ್ನು ಖರೀದಿ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಿಜೆಪಿ ಹಾಳು ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಹಾಗೂ ನಗರ ಕಾಂಗ್ರೆಸ್ ವತಿಯಿಂದ ಗಾಂಧಿವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಹಲವು ಶಾಸಕರನ್ನು ಬಿಜೆಪಿ ಖರೀದಿಸಿ, ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸುತ್ತಿದೆ. ಶಾಸಕರಿಗೆ 25 ಕೋಟಿ ರೂ. ಆಫರ್ ನೀಡಿ ರಾಜೀನಾಮೆ ನೀಡುವಂತೆ ಮಾಡಲಾಗಿದೆ.
ರಾಜ್ಯ ರಾಜಕೀಯದಲ್ಲಿ ಮೋದಿ ಹಾಗೂ ಅಮಿತ್ ಶಾ ಕೈವಾಡವಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಆಪರೇಷನ್ ಕಮಲ ಮಾಡುತ್ತಲೇ ಬರುತ್ತಿದೆ. ಪದೇ ಪದೇ ಇಂತಹ ಕೃತ್ಯಗಳಿಗೆ ಕೈಹಾಕಿ ರಾಜ್ಯದ ಅಭಿವೃದ್ಧಿಯನ್ನು ಅಸ್ಥಿರಗೊಳಿಸುತ್ತಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಕಿಡಿಕಾರಿದರು.