ETV Bharat / state

ರಾಜ್ಯ ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು: ಸಂಸದ ಶ್ರೀನಿವಾಸ್ ಪ್ರಸಾದ್

author img

By ETV Bharat Karnataka Team

Published : Oct 2, 2023, 9:31 PM IST

ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಈ ಬದಲಾವಣೆ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದರು. ಸಂಸದರ ಜೊತೆಗೆ ಈಟಿವಿ ಭಾರತ್ ಮೈಸೂರು ಪ್ರತಿನಿಧಿ ನಡೆಸಿದ ಸಂದರ್ಶನ ಇಲ್ಲಿದೆ.

ಸಂಸದ ಶ್ರೀನಿವಾಸ್ ಪ್ರಸಾದ್
ಸಂಸದ ಶ್ರೀನಿವಾಸ್ ಪ್ರಸಾದ್

ಸಂಸದ ಶ್ರೀನಿವಾಸ್ ಪ್ರಸಾದ್ ಸಂದರ್ಶನ

ಮೈಸೂರು : ಆಪರೇಷನ್ ಕಮಲದ ನಂತರ ಒಳ್ಳೆಯ ಸರ್ಕಾರ ನೀಡಲಿಲ್ಲ. ಪಕ್ಷದೊಳಗೆ ಹಲವಾರು ವಿರೋಧಗಳು ತುಂಬಿ ಹೋಗಿದ್ದವು. ಒಳ್ಳೆಯ ನಾಯಕತ್ವ ಕೂಡ ಒಳ್ಳೆಯ ಆಡಳಿತ ನೀಡಲಿಲ್ಲ. ಈಗಲಾದರೂ ರಾಜ್ಯ ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಈಟಿವಿ ಭಾರತ್​ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದರು.

ಕಾಂಗ್ರೆಸ್ ಈಗ ಎಲ್ಲ ಕಡೆ ಗ್ಯಾರಂಟಿ ಕಾರ್ಡ್‌ಗಳನ್ನು ಬಳಸಿ ಪ್ರಚಾರ ಮಾಡುತ್ತಿದೆ. ಈ ಗ್ಯಾರಂಟಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು, ಅನುಷ್ಠಾನಕ್ಕೆ ಸಂಪನ್ಮೂಲ ಎಲ್ಲಿ ಹುಡುಕುತ್ತಾರೆ ಎಂಬುದು ಗೊತ್ತಿಲ್ಲ. ಅದು ಅವರಿಗೆ ಬಿಟ್ಟಿದ್ದು. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್​ನ ಗೆಲುವು ರಾಷ್ಟ್ರ ಮಟ್ಟದ ಕಾಂಗ್ರೆಸ್​ಗೆ ಒಂದು ಟಾನಿಕ್ ಸಿಕ್ಕಂತಾಗಿದೆ. ರಾಷ್ಟ್ರಮಟ್ಟದ ಕಾಂಗ್ರೆಸ್ ಈಗ ಐಎನ್​ಸಿ ಕಾಂಗ್ರೆಸ್ ಅಲ್ಲ, ಈಗ ಅದು ಇಂಡಿಯನ್ ನ್ಯಾಷನಲ್ ಗ್ಯಾರಂಟಿ ಕಾರ್ಡ್ ಕಾಂಗ್ರೆಸ್ ಆಗಿದೆ. ಅದನ್ನು ಅವರು ಎಲ್ಲೆಡೆ ಪ್ಲೇ ಮಾಡುತ್ತಿದ್ದಾರೆ ಎಂದರು.

ನಾವು ಎಡವಿದ್ದೆಲ್ಲಿ?. ಏನು? ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಿಜೆಪಿ ರಾಷ್ಟ್ರೀಯ ಪಕ್ಷ ಕರ್ನಾಟಕದಲ್ಲಿ, ಸೌತ್ ಇಂಡಿಯಾ ಗೇಟ್​ನಲ್ಲಿ ಕುಸಿದು ಬಿದ್ದಿದೆ. ರಾಜ್ಯದಲ್ಲಿ ಬಿಜೆಪಿ ದುರ್ಬಲವಾಗಿದೆ. ವಿರೋಧಪಕ್ಷದ ನಾಯಕನ ಆಯ್ಕೆಯಾಗಿಲ್ಲ. ಸೋಲಿನ ಹೊಣೆ ಹೊತ್ತ ನಾಯಕರ ಬದಲಾವಣೆಯಾಗಿಲ್ಲ. ಅದರ ಬಗ್ಗೆ ಚಿಂತೆಯೂ ಇಲ್ಲ. ಈಗ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ವಿರೋಧ ಮಾಡುತ್ತಿದ್ದ ಎಲ್ಲಾ 30 ಪಕ್ಷಗಳು ಒಟ್ಟಾಗಿ ಇಂಡಿಯಾ ಎಂಬ ಹೆಸರನ್ನು ಮಾಡಿಕೊಂಡಿದ್ದರೆ, ಮತ್ತೊಂದು ಕಡೆ ಒಂಬತ್ತುವರೆ ವರ್ಷ ಒಳ್ಳೆಯ ಆಡಳಿತ ನೀಡಿರುವ ಮೋದಿ ನೇತೃತ್ವದಲ್ಲಿ ಮುಂದಿನ ಬಾರಿಯೂ ಎನ್​ಡಿಎ ಪಕ್ಷವೇ ಅಧಿಕಾರಕ್ಕೆ ಬರುತ್ತದೆ. ನರೇಂದ್ರ ಮೋದಿಯವರೇ ಪ್ರಧಾನಿಯಾಗುತ್ತಾರೆ ಎನ್ನುವ ಸನ್ನಿವೇಶ ಇದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜನಗರದಿಂದ ಯಾರು ಚುನಾವಣೆಗೆ ನಿಲ್ಲುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದನ್ನು ಪಕ್ಷದವರು ತೀರ್ಮಾನ ಮಾಡುತ್ತಾರೆ. ನಾನು ಮುಂದಿನ ಬಾರಿ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ರಾಜಕೀಯದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದರು.

ಇದನ್ನೂ ಓದಿ: ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಎರಡೂ ಪಕ್ಷಗಳ ನಾಯಕರು ಕಾಂಗ್ರೆಸ್‌ಗೆ : ಡಿ ಕೆ ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.