ETV Bharat / state

ಮೈಸೂರು ದಸರಾಗೆ ಬರುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ: ಸಚಿವ ಸೋಮಶೇಖರ್

author img

By

Published : Aug 29, 2022, 10:42 PM IST

ದಸರಾ ಸಂದರ್ಭದಲ್ಲಿ ಹೊರ ರಾಜ್ಯಗಳಿಂದ ಆಗಮಿಸುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಭೆ ನಡೆಸಿದರು.

KN_MYS_04_Dasarameeting_vis_KA10003
ದಸರಾ ಪೂರ್ವಭಾವಿ ಸಭೆ

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವ-2022ರ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ನಡೆಯಿತು. ಈ ಸಭೆಯಲ್ಲಿ ದಸರಾ ಕಾರ್ಯಕ್ರಮಗಳ ಆಯೋಜನೆಯ ಸಂಬಂಧ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು. ಹೊರ ರಾಜ್ಯಗಳಿಂದ ಆಗಮಿಸುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಹೆಸರನ್ನು ಸೇರ್ಪಡೆ ಮಾಡುವಂತೆಯೂ ಸೂಚಿಸಿದರು.

ಮೈಸೂರಿಗೆ ಆಗಮಿಸುವ ಪ್ರವಾಸಿಗರು ಕೆಆರ್​ಎಸ್, ಶ್ರೀರಂಗಪಟ್ಟಣ ಸೇರಿದಂತೆ ಮಂಡ್ಯ ಜಿಲ್ಲೆಯ ನಾನಾ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ತೆರಳುವ ಸಂದರ್ಭದಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಹೀಗಾಗಿ ಅಂತಾರಾಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವಾಗ ಮಂಡ್ಯ ಜಿಲ್ಲೆಯ ಹೆಸರು ಕೂಡ ಸೇರ್ಪಡೆ ಮಾಡಬೇಕು ಎಂದರು.

ಇದೇ ಮೊದಲ ಬಾರಿಗೆ ಆರೋಗ್ಯ ಮತ್ತು ಕೈಗಾರಿಕಾ ದಸರಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆರೋಗ್ಯ ಮೇಳ ಹಾಗೂ ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ವಸ್ತು ಪ್ರದರ್ಶನ ಆಯೋಜಿಸಲು ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ನಾಲ್ಕು ದಿನ ಕೈಗಾರಿಕಾ ದಸರಾ ಆಚರಣೆಗೆ ಕೈಗಾರಿಕಾ ಸಂಘದವರು ಮನವಿ ಮಾಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದರು.

ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ, ದಸರಾ ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ ವೀಕ್ಷಣೆ ಮಾಡುವ ಸಂಬಂಧ ಏಕೀಕೃತ ಟಿಕೆಟ್ ನೀಡುವ ಬಗ್ಗೆ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮಾಹಿತಿ ನೀಡಿದರು.

ಇದನ್ನೂ ಓದಿ:ಮೈಸೂರು ದಸರಾ 2022: ಅರಮನೆಯ ಆನೆ ಬಾಗಿಲಿನಲ್ಲಿ ಫಿರಂಗಿಗಳಿಗೆ ಪೂಜೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.