ETV Bharat / state

ಮೈಸೂರು: ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ರೈತರ ಸಾವು

author img

By

Published : Nov 6, 2022, 12:18 PM IST

Updated : Nov 6, 2022, 12:46 PM IST

ಜಮೀನಿನಲ್ಲಿ ಬಿದ್ದಿದ್ದ ವಿದ್ಯುತ್​ ತಂತಿ ಸ್ಪರ್ಶಿಸಿ ಮೂವರು ರೈತರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ.

Three farmers died by touching power line
ವಿದ್ಯುತ್ ತಂತಿ ತಗುಲಿ ಮೂವರು ರೈತರ ಸಾವು

ಮೈಸೂರು: ವಿದ್ಯುತ್ ತಂತಿ ತಗುಲಿ ಮೂವರು ರೈತರು ದಾರುಣವಾಗಿ ಸಾವಿಗೀಡಾದ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದ ಬಳಿ ನಡೆದಿದೆ. ಗ್ರಾಮದ ನಿವಾಸಿಗಳಾದ ರಾಚೇಗೌಡ (60), ಹರೀಶ್ (33) ಹಾಗು ಮಹದೇವಸ್ವಾಮಿ (38) ಮೃತರು.

ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ರೈತರ ಸಾವು

ಮುಂಜಾನೆ ಭತ್ತದ ಗದ್ದೆಗೆ ಗೊಬ್ಬರ ಹಾಕಲು ಬಂದಾಗ ರಾಚೇಗೌಡ ತಮ್ಮ ಜಮೀನಿನಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಒದ್ದಾಡುತ್ತಿದ್ದರು. ಇದನ್ನು ನೋಡಿದ ಅವರ ಪುತ್ರ ತಕ್ಷಣ ಮಹದೇವಸ್ವಾಮಿಯನ್ನು ರಕ್ಷಿಸಲು ಮುಂದಾಗಿದ್ದಾರೆ. ಮಹದೇವಸ್ವಾಮಿಯ ಪ್ರಾಣ ಉಳಿಸಲು ಹರೀಶ್ ಹೋಗಿದ್ದಾರೆ. ಹೀಗೆ ಮೂವರು ಸ್ಥಳದಲ್ಲಿಯೇ ಮೃತಪಟ್ಟರು.

ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಮೂವರು ಮೃತಪಟ್ಟು ಗಂಟೆ ಕಳೆದರೂ, ಅಧಿಕಾರಿಗಳು ಸ್ಥಳಕ್ಕಾಗಮಿಸಿಲ್ಲ. ಮೃತ ವ್ಯಕ್ತಿಗಳ ಸಾವಿಗೆ ನ್ಯಾಯ ಕೊಡಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ. ತಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Haveri: ಸಿಎಂ ಸ್ವಕ್ಷೇತ್ರದಲ್ಲಿ ವಿದ್ಯುತ್ ಸ್ಪರ್ಶಿಸಿ ಇಬ್ಬರು ರೈತರ ಸಾವು

Last Updated :Nov 6, 2022, 12:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.