ETV Bharat / state

ಕೆಆರ್​ಎಸ್ ಹಿನ್ನೀರಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

author img

By

Published : Jun 13, 2023, 6:21 PM IST

ಕೆಆರ್​ಎಸ್ ಹಿನ್ನೀರಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

Etv Bharatcrime-two-engineering-students-drowned-in-krs-back-water
Two students died: ಕೆಆರ್​ಎಸ್ ಹಿನ್ನೀರಿಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಮೈಸೂರು: ಕೆಆರ್​ಎಸ್ ಜಲಾಶಯದ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿರಂತ್ ಮತ್ತು ಸುನೀಲ್ (22) ಮೃತರು. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೈಸೂರು ತಾಲೂಕಿನ ಮೀನಾಕ್ಷಿಪುರದ ಬಳಿ ಇರುವ ಅಣೆಕಟ್ಟಿನ ಹಿನ್ನೀರಿನಲ್ಲಿ ಈಜಲು ತೆರಳಿದ್ದರು ಎಂಬ ಮಾಹಿತಿ ದೊರೆತಿದೆ.

ಸ್ನೇಹಿತರಿಬ್ಬರು ಒಟ್ಟಿಗೆ ಈಜಲು ನೀರಿಗಿಳಿದ್ದಾರೆ. ಸುಮಾರು ಅರ್ಧ ಗಂಟೆ ಈಜಿದ ನಂತರ ಇಬ್ಬರೂ ವಿದ್ಯಾರ್ಥಿಗಳು ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ. ಚಿರಂತ್ ಹಾಸನ ಮೂಲದವರಾಗಿದ್ದು ಹಾಗೂ ಸುನೀಲ್ ಬೀದರ್‌ನವರು. ಇಲವಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಸಿವಿನಿಂದ ಬಳಲಿ ಹೆಣ್ಣು ಹುಲಿ ಸಾವು: ನಾಗರಹೊಳೆಯ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಡಿ ಬಿ.ಕುಪ್ಪೆ ವಲಯದ ಕಬಿನಿ- ತಡಿಕಿಹಳ್ಳ ಅರಣ್ಯ ಪ್ರದೇಶದಲ್ಲಿ 18 ತಿಂಗಳ ಹೆಣ್ಣು ಹುಲಿ ಜ್ವರ ಮತ್ತು ಹಸಿವಿನಿಂದ ಬಳಲಿ ಅಸುನೀಗಿರುವ ಘಟನೆ ನಡೆದಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಎಂದಿನಂತೆ ಗಸ್ತು ತಿರುಗುತ್ತಿದ್ದಾಗ ಕಳೇಬರ ಪತ್ತೆಯಾಗಿತ್ತು.

ಮೃತ ಹುಲಿಯ ಮೈ ಮೇಲೆ ಗಾಯಗಳಿತ್ತು. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ ಹುಲಿ ಮತ್ತೊಂದು ಹುಲಿಯ ಜೊತೆ ಕಾದಾಟದಲ್ಲಿ ಎಡಗಾಲಿನ ಮೂಳೆ ಮುರಿದಿರುವುದು ಕಂಡುಬಂದಿತ್ತು. ಮೂಳೆ ಮುರಿತದಿಂದ ಹುಲಿ ಆಹಾರವನ್ನು ಬೇಟೆಯಾಡಲು ಸಾಧ್ಯವಾಗದೇ ಜ್ವರ ಮತ್ತು ಹಸಿವಿನಿಂದ ಸಾವನ್ನಪ್ಪಿದೆ ಎಂದು ಪಶು ವೈದ್ಯಾಧಿಕಾರಿಗಳು ದೃಢಪಡಿಸಿರುವುದಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

ಇದನ್ನೂ ಓದಿ: ಮುರುಡೇಶ್ವರದಲ್ಲಿ ಸಮುದ್ರಕ್ಕೆ ಇಳಿದ ಪ್ರವಾಸಿಗರು: ಓರ್ವ ನಾಪತ್ತೆ, ಇಬ್ಬರ ರಕ್ಷಣೆ

ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ಸಾವು: ಇತ್ತೀಚಿಗೆ ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ 2ನೇ ಹಂತದ ನೀಲಾದ್ರಿ ಬಳಿಯ ಕ್ವಾರಿಯಲ್ಲಿ ನಡೆದಿತ್ತು. ಮೂವರೂ 10ನೇ ತರಗತಿಯಲ್ಲಿ ಓದುತ್ತಿದ್ದರು. ಮೃತ ವಿದ್ಯಾರ್ಥಿಗಳನ್ನು ಕಿರಣ್ (13) ತೀರ್ಥ(13) ಹಾಗೂ ಫೈಜಲ್ (14) ಎಂದು ಗುರುತಿಸಲಾಗಿತ್ತು. ಆಟ ಆಡಲು ಹೋಗಿದ್ದ ತೀರ್ಥ ಮತ್ತು ಫೈಜಲ್​​ ರಾತ್ರಿ ಆದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಎಲ್ಲೆಡೆ ಹುಡುಕಾಡಿದ್ದರು.

ಇದಾದ ನಂತರ, ಕೆರೆ ಬಳಿ ಬಾಲಕರ ಸೈಕಲ್, ಬಟ್ಟೆ ಮತ್ತು ಚಪ್ಪಲಿ ಪತ್ತೆಯಾಗಿದ್ದವು. ಈಜು ಬಾರದಿದ್ದರು ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದಾಗ ದುರ್ಘಟನೆ ಸಂಭವಿಸಿತ್ತು. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈಜುಕೊಳದಲ್ಲಿ ಬಾಲಕರು ಮುಳಗಿ ಸಾವು: ದಾವಣಗೆರೆಯ ದೇವರಾಜ ಅರಸು ಬಡಾವಣೆಯಲ್ಲಿ ಕಳೆದ ಮಾರ್ಚ್ ತಿಂಗಳಿನಲ್ಲಿ ನವೀಕರಣಗೊಂಡು ಲೋಕಾರ್ಪಣೆಯಾಗಿದ್ದ ಈಜುಕೊಳಕ್ಕೆ ಈಜಲು ತೆರಳಿದ್ದ ಬಾಲಕರಿಬ್ಬರು ಮೇ.19 ರಂದು ಮುಳುಗಿ ಸಾವನ್ನಪ್ಪಿದ್ದರು. ಮೃತರನ್ನು ದಾವಣಗೆರೆ ನಗರದ ಬೀಡಿ ಲೇಔಟ್​ನ ನಿವಾಸಿಗಳೆಂದು ಗುರುತಿಸಲಾಗಿತ್ತು. ಈಜುಕೊಳಕ್ಕಾಗಮಿಸಿದ ಇಬ್ಬರು ಬಾಲಕರಿಗೆ ಈಜು ಬಾರದ ಕಾರಣ ಸಾವನ್ನಪ್ಪಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.