ಮೈಸೂರು : ಕರುಳ ಕುಡಿಯನ್ನೇ ಕೊಚ್ಚಿ ಸಾಯಿಸಿದ್ದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

author img

By

Published : Jan 14, 2022, 4:40 PM IST

ಕರುಳ ಕುಡಿಯನ್ನೇ ಕೊಚ್ಚಿ ಸಾಯಿಸಿದ್ದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

ತನ್ನ ಮಗನನ್ನು ಕೊಂದ ಘಟನೆಯಿಂದ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ‌..

ಮೈಸೂರು : ನಾಲ್ಕೈದು ದಿನಗಳ ಹಿಂದೆ ತಾನು ಹೆತ್ತ ಗಂಡು ಮಗುವನ್ನೇ ಮನಬಂದಂತೆ ಕೊಚ್ಚಿ ಹತ್ಯೆ ಮಾಡಿದ್ದ ಮಾನಸಿಕ ಅಸ್ವಸ್ಥ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಈಕೆಯ ಮೃತದೇಹ ಹೆಚ್ ಡಿ ಕೋಟೆ ತಾಲೂಕಿನ ಮೇಟಿಕುಪ್ಪೆ ಕೆರೆಯಲ್ಲಿ ಪತ್ತೆಯಾಗಿದೆ. ಯಡತೊರೆ ಗ್ರಾಮದ ನಿವಾಸಿ ಮಾನಸಿಕ ಅಸ್ವಸ್ಥೆ ಭವಾನಿ ಎಂಬುವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಈಕೆ ನಾಲ್ಕೈದು ದಿನಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ಹೆತ್ತ 4 ವರ್ಷದ ಶ್ರೀನಿವಾಸ್ ಎಂಬ ಮಗನನ್ನ ಮನಬಂದಂತೆ ಮಚ್ಚಿನಿಂದ ಕೊಚ್ಚಿ ಸಾಯಿಸಿ ಪರಾರಿಯಾಗಿದ್ದಳು.

ಈ ಬಗ್ಗೆ ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಎಲ್ಲೋ ತಲೆಮರೆಸಿಕೊಂಡಿರಬೇಕು ಎಂಬ ಶಂಕೆ ವ್ಯಕ್ತವಾಗಿತ್ತು.

ಆದರೆ, ಇದೀಗ ಮೇಟಿಕುಪ್ಪೆ ಕೆರೆಯಲ್ಲಿ ಈಕೆಯ ಮೃತದೇಹ ಪತ್ತೆಯಾಗಿದೆ. ತನ್ನ ಮಗನನ್ನು ಕೊಂದ ಘಟನೆಯಿಂದ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ‌.

ಇದನ್ನೂ ಓದಿ : ಮೈಸೂರಲ್ಲಿ 4 ವರ್ಷದ ಕರುಳ ಕುಡಿಯನ್ನೇ ಕೊಚ್ಚಿಹಾಕಿದ ಮಾನಸಿಕ ಅಸ್ವಸ್ಥ ತಾಯಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.