ETV Bharat / state

ಮದುವೆಗೆ ಇದ್ದಿದ್ದು ಮೂರೇ ದಿನ..: ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡ ಮದುಮಗ

author img

By

Published : Sep 12, 2021, 6:17 PM IST

groom death in a road accident
ರಸ್ತೆ ಅಪಘಾತದಲ್ಲಿ ಮಧುಮಗ ಸಾವು

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮದುಮಗ ಸಾವನ್ನಪ್ಪಿದ್ದಾರೆ.

ಮೈಸೂರು: ಮದುವೆಗೆ ಮೂರು ದಿನ ಬಾಕಿ ಇರುವಾಗಲೇ ಮದುಮಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ.

ಸರಗೂರು ತಾಲೂಕಿನ ತೆರಣಿಮುಂಟಿ ಗ್ರಾಮದ ನಾಗರಾಜು ಎಂಬುವವರ ಪುತ್ರ ಲೋಕೇಶ್ (30) ಮೃತ ದುರ್ದೈವಿ. ಈ ಘಟನೆಯಲ್ಲಿ ಶಂಕರ (30) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಅಪಘಾತದಲ್ಲಿ ಮಧುಮಗ ಸಾವು

ಸ್ನೇಹಿತನ ಜೊತೆ ಬೈಕ್​ನಲ್ಲಿ ಮೈಸೂರಿಗೆ ತೆರಳಿ ಮದುವೆ ಬಟ್ಟೆ ಖರೀದಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಪುರ ಗ್ರಾಮದ ಕೆರೆ ತಿರುವಿನಲ್ಲಿ ಟಾಟಾ ಏಸ್ ಗೂಡ್ಸ್ ವಾಹನ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಸವಾರರಿಬ್ಬರು ರಸ್ತೆಗೆ ಬಿದ್ದು, ಲೋಕೇಶ್​​ ತಲೆಯಿಂದ ತೀವ್ರ ರಕ್ತಸ್ರಾವವಾಗಿದೆ. ಬಳಿಕ ಅವರು ಸ್ಥಳದಲ್ಲಿಯೇ ಮೃತಪಟ್ಟರು.

ಸ್ಥಳಕ್ಕೆ ಹೆಚ್.ಡಿ.ಕೋಟೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಶವಾಗಾರಕ್ಕೆ ರವಾನಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಲಾರಿ- ಜೀಪ್ ನಡುವೆ ಭೀಕರ ಅಪಘಾತ, 7 ಸಾವು, ಐವರು ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.