ETV Bharat / state

ಲಾರಿ-ಬೈಕ್​​​ ನಡುವೆ ಡಿಕ್ಕಿ: ಬಾಲಕ ಸ್ಥಳದಲ್ಲೇ ಸಾವು

author img

By

Published : Dec 2, 2019, 9:45 PM IST

boy
ಬಾಲಕ ಸಾವು

ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಹಿಂಬದಿ ಕುಳಿತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಲಿಂಗಸೂಗೂರು ತಾಲೂಕಿನ ಜನತಾಪುರ ಗ್ರಾಮದ ಬಳಿ ನಡೆದಿದೆ.

ರಾಯಚೂರು: ಕಂಟೈನರ್​​ ಲಾರಿ, ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಹಿಂಬದಿ ಕುಳಿತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಜನತಾಪುರ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಸುವರ್ಣ ಸ್ವಾಮಿ (13) ಮೃತ ಬಾಲಕನೆಂದು ಗುರುತಿಸಲಾಗಿದೆ. ತಂದೆ-ಮಗ ಬೈಕ್ ಮೇಲೆ ಮುದಗಲ್ ಗ್ರಾಮದಿಂದ ಬನ್ನಿಗೋಳ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಕಂಟೈನರ್​​ ಲಾರಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್​ನ ಹಿಂಬದಿಯಲ್ಲಿ ಕುಳಿತಿದ್ದ ಮಗ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಂದೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.

ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Intro:ಸ್ಲಗ್: ಸ್ಥಳದಲ್ಲೇ ಬಾಲಕ ಸಾವು
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೦೨-೧೨-೨೦೧೯
ಸ್ಥಳ: ರಾಯಚೂರು

ಆಂಕರ್: ಕಾಟೇನರ್ ಲಾರಿ, ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಹಿಂಬದಿ ಕುಳಿತ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ.

Body:ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಜನತಾಪುರ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಸುವರ್ಣ ಸ್ವಾಮಿ (೧೩) ಮೃತ ಬಾಲಕನೆಂದು ಗುರುತಿಸಲಾಗಿದೆ. ತಂದೆ ಮಗ ಬೈಕ್ ಮೇಲೆ ಮುದಗಲ್ ಗ್ರಾಮದಿಂದ ಬನ್ನಿಗೋಳ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದೆ ಕಾಟೇನರ್ ಲಾರಿ ಬೈಕ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ನ ಹಿಂಬದಿಯಲ್ಲಿ ಕುಳಿತದ ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ ತಂದೆಗೆ ಸಣ್ಣಪುಟ ಗಾಯಗಳು ಆಗಿವೆ ಎಂದು ಹೇಳಲಾಗುತ್ತಿದೆ. ಕಾಟೇನರ್ ಲಾರಿ ಚಾಲಕ ಪೊಲೀಸ್ ಬಂಧಿಸಿದ್ದು, ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. Conclusion:ಮಗನನ್ನು ಕಳೆದುಕೊಂಡು ಪೊಷಕರ ಆಕ್ರಂದನ ಮುಗಿಲು ಮುಟ್ಟಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.