ETV Bharat / state

ಮಳೆಯಿಂದ ಗುಂಡಿ ಬಿದ್ದ ಈಚನಾಳ ಸಂಪರ್ಕಿಸುವ ರಸ್ತೆ: ವಾಹನ ಸವಾರರ ಪರದಾಟ

author img

By

Published : Oct 23, 2020, 9:49 AM IST

Buttons on roads with heavy rain in Lingsugur
ಮಳೆಯಿಂದ ಈಚನಾಳ ಸಂಪರ್ಕಿಸುವ ರಸ್ತೆಯಲ್ಲಿ ಹೊಂಡಗಳ ಸೃಷ್ಠಿ

ಲಿಂಗಸುಗೂರಿನಿಂದ ನಾರಾಯಣಪುರ ಮುಖ್ಯ ರಸ್ತೆಯ ಈಚನಾಳ ಕ್ರಾಸ್​​ವರೆಗೆ ಗ್ರಾಮಕ್ಕೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಬೃಹತ್​ ಗುಂಡಿಗಳು ನಿರ್ಮಾಣಗೊಂಡಿದ್ದು, ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವಂತಾಗಿದೆ.

ಲಿಂಗಸುಗೂರು: ನಾರಾಯಣಪುರ ಮುಖ್ಯ ರಸ್ತೆಯ ಈಚನಾಳ ಕ್ರಾಸ್​​ವರೆಗೆ ಗ್ರಾಮಕ್ಕೆ ಸಂಪರ್ಕಿಸುವ ಮುಖ್ಯ ರಸ್ತೆಯು ಜಲಾವೃತಗೊಂಡು ಮೂರು ತಿಂಗಳಲ್ಲಿ ಬೃಹತ್​​ ಗುಂಡಿಗಳು ನಿರ್ಮಾಣಗೊಂಡಿವೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವಂತಾಗಿದೆ.

ಮಳೆಯಿಂದ ಗುಂಡಿ ಬಿದ್ದ ಈಚನಾಳ ಸಂಪರ್ಕಿಸುವ ರಸ್ತೆ

ಈ ಕುರಿತು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲವಂತೆ. ಚುನಾಯಿತ ಪ್ರತಿನಿಧಿಗಳು ಇತ್ತ ಗಮನ ಹರಿಸುತ್ತಿಲ್ಲ. ಈಚನಾಳ ಅಲ್ಲದೆ ತೊರಲಬಂಚಿ, ನೀರಲಕೇರಿ ಗ್ರಾಮ ಸೇರಿದಂತೆ ಇತರೆ ಗ್ರಾಮಗಳಿಗೆ ತೆರಳಲು ಇದೇ ಮುಖ್ಯ ರಸ್ತೆಯಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಸಂಬಂಧಿಸಿದ ಅಧಿಕಾರಿಗಳು ರಸ್ತೆಯ ಶಾಶ್ವತ ದುರಸ್ತಿಗೆ ಮುಂದಾಗಬೇಕು. ಇಲ್ಲವಾದಲ್ಲಿ ಗ್ರಾಮಸ್ಥರು ಸೇರಿಕೊಂಡು ತಹಶೀಲ್ದಾರ್​ ಕಚೇರಿ ಆವರಣದಲ್ಲಿ ಧರಣಿ ನಡೆಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.