ETV Bharat / state

ಕಾಲು ಜಾರಿ ನದಿಗೆ ಬಿದ್ದ ಯುವಕ ಶವವಾಗಿ ಪತ್ತೆ

author img

By

Published : Aug 30, 2020, 7:37 PM IST

body found in tungabhadra river
ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದ ಯುವಕ

ರಾಯಚೂರು ಜಿಲ್ಲೆ ಮಾನವಿ ತಾಲೂಕಿನ ಹರನಹಳ್ಳಿ ಗ್ರಾಮದ ತುಂಗಭದ್ರಾ ನದಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಯುವಕ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.

ರಾಯಚೂರು: ಮಾನವಿ ತಾಲೂಕಿನ ಹರನಹಳ್ಳಿ ಗ್ರಾಮದ ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ನದಿಗೆ ಬಿದ್ದ ಶಾಸ್ತ್ರೀ ಕ್ಯಾಂಪ್​ನ ನಿವಾಸಿ ಸಂದೀಪ್ ಕುಮಾರ (27) ಶವವಾಗಿ ಪತ್ತೆಯಾಗಿದ್ದಾನೆ.

body found in tungabhadra river
ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದ ಯುವಕ

ಈ ಯುವಕ ರಾಮಲಿಂಗೇಶ್ವರ ದೇವಸ್ಥಾನ ಪಕ್ಕದಲ್ಲಿ ಫೋಟೊ ತೆಗೆದುಕೊಳ್ಳಲು ಗೆಳೆಯರೊಂದಿಗೆ ನದಿ ತೀರಕ್ಕೆ ತೆರಳಿದ್ದಾನೆ. ಈ ವೇಳೆ ಕಾಲು ಜಾರಿ ನದಿ ನೀರಿಗೆ ಬಿದ್ದಿದ್ದಾನೆ ಎನ್ನಲಾಗಿದೆ.

ಸುದ್ದಿ ತಿಳಿದು ಅಗ್ನಿಶಾಮಕ ದಳ ಮತ್ತು ಎನ್​ಡಿಆರ್​ಎಫ್ ತಂಡ ಯುವಕನ ಶೋಧ ಕಾರ್ಯ ನಡೆಸಿದೆ. ನಂತರ ಆತನ ಶವ ಪತ್ತೆಯಾಗಿದೆ. ನದಿಗೆ ಬಿದ್ದ ವೇಳೆ ಯುವಕನ ತಲೆಗೆ ಪೆಟ್ಟು ಬಿದ್ದಿದೆ.

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಶ್ರೀನಿವಾಸ್ ಶಾಸ್ತ್ರಿ ಕ್ಯಾಂಪ್​ಗೆ ಭೇಟಿ ನೀಡಿ, ಮೃತ ಸಂದೀಪ್ ಕುಟುಂಬಕ್ಕೆ ಸಾಂತ್ವನ ಹೇಳಿದರು. ಇದೇ ವೇಳೆ ವಿಪತ್ತು ಪರಿಹಾರ ನಿಧಿಯಿಂದ ಮೃತನ ಕುಟುಂಬಕ್ಕೆ ಶೀಘ್ರ ಪರಿಹಾರ ವಿತರಿಸಲು ತಹಶೀಲ್ದಾರ್ ಅವ​ರಿಗೆ ಸೂಚನೆ ಕೊಟ್ಟರು.

ಈ ಕುರಿತು ಸ್ಥಳೀಯ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ್ದು, ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.