ETV Bharat / state

ಮಂತ್ರಾಲಯದಲ್ಲಿ ಶ್ರೀರಾಮನ 108 ಅಡಿ ಎತ್ತರದ ಪಂಚಲೋಹ ಪ್ರತಿಮೆ.. ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಅಮಿತ್​ ಶಾ

author img

By

Published : Jul 23, 2023, 7:41 PM IST

Updated : Jul 23, 2023, 7:56 PM IST

Foundation stone for installation of 108 feet statue of Lord Rama
ಶ್ರೀರಾಮನ ಪಂಚಲೋಹ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು

ಮಂತ್ರಾಲಯದ ಪವಿತ್ರ ರಾಯರ ಬೃಂದಾವನವಿರುವ ಸ್ಥಳದ ಹತ್ತಿರ ಶ್ರೀರಾಮನ ಭವ್ಯ ಪ್ರತಿಮೆ ಸ್ಥಾಪನೆ ಮಾಡುತ್ತಿರುವುದು ಸನಾತನ ಮತ್ತು ವೈಷ್ಣವ ಪರಂಪರೆ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ರಾಯಚೂರು: ಒಂದೆಡೆ ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಹಾಗೂ ಬೃಹತ್​ ಮಂದಿರ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಈ ನಡುವೆ ತುಂಗಭದ್ರಾ ತೀರದ ವಾಸಿಯಾಗಿರುವ ಕಲಿಯುಗ ಕಾಮಧೇನು ಭಕ್ತರ ಕಲ್ಪವೃಕ್ಷ ಶ್ರೀರಾಘವೇಂದ್ರ ಸ್ವಾಮಿಗಳು ನೆಲೆಸಿರುವ ಪುಣ್ಯಭೂಮಿಯಲ್ಲಿ ಶ್ರೀರಾಮನ ಭವ್ಯ ಪ್ರತಿಮೆ‌‌ ಸ್ಥಾಪನೆಗೆ ಇಂದು ಅಡಿಗಲ್ಲು ಹಾಕಲಾಗಿದೆ. 108 ಅಡಿ ಎತ್ತರದ‌ ಪಂಚಲೋಹ ಪ್ರತಿಮೆ ಸ್ಥಾಪನೆಗೆ ಭಾನುವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವರ್ಚುವಲ್ ಮೂಲಕ ಶಂಕು ಸ್ಥಾಪನೆ ನೆರವೇರಿಸಿದರು. ಮಂತ್ರಾಲಯದ ರಾಯರ ಮಠದ ಸಮೀಪ ಸುಮಾರು 10 ಎಕರೆಯ ವಿಶಾಲವಾದ ಪ್ರದೇಶದಲ್ಲಿ ಆಂದಾಜು 500 ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯವಾದ ಪ್ರತಿಮೆಯನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ.

Foundation stone for installation of 108 feet statue of Lord Rama
ಶ್ರೀರಾಮನ ಪಂಚಲೋಹ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು

ಸನಾತನ ಮತ್ತು ವೈಷ್ಣವ ಪರಂಪರೆ ಬೆಳವಣಿಗೆಗೆ ಸಹಕಾರಿ: ಈ‌ ವೇಳೆ ಮಾತನಾಡಿದ ಅಮಿತ್​ ಶಾ ಅವರು "ವಿಜಯನಗರ ಸಾಮ್ರಾಜ್ಯದ ಇತಿಹಾಸ ಪರಂಪರೆಯನ್ನು ಹೊಂದಿರುವ ತುಂಗಭದ್ರಾ ನದಿ ತೀರದಲ್ಲಿ ಇಂತಹ ಬೃಹತ್ ಹಾಗೂ ಭವ್ಯ ಪ್ರತಿಮೆ ಸ್ಥಾಪನೆ ಮಾಡಲಾಗುತ್ತಿದೆ. ಸನಾತನ ಮತ್ತು ವೈಷ್ಣವ ಪರಂಪರೆ ಬೆಳವಣಿಗೆಗೆ ಇದು ಸಹಕಾರಿಯಾಗಲಿದೆ. ಶೀಘ್ರದಲ್ಲಿಯೇ ಪ್ರತಿಮೆ ಸ್ಥಾಪನೆ ಕಾರ್ಯ ಪೂರ್ಣಗೊಳ್ಳಲಿ" ಎಂದು ಶುಭ ಕೋರಿದರು. 10 ಎಕರೆ ಪ್ರದೇಶದಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಶ್ರೀರಾಮನ ಮೂರ್ತಿಯನ್ನು ಸ್ಥಾಪಿಸುವ ಕಾರ್ಯಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

Foundation stone for installation of 108 feet statue of Lord Rama
ಶ್ರೀರಾಮನ ಪಂಚಲೋಹ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು

ಇದನ್ನೂ ಓದಿ: ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಹುಂಡಿ ಎಣಿಕೆ.. 36ದಿನಗಳಲ್ಲಿ ಹರಿದುಬಂತು ಹಣದ ಹೊಳೆ

ಮಂತ್ರಾಲಯ ಅತ್ಯಂತ ಪವಿತ್ರ ಸ್ಥಳ: ಇದೇ ವೇಳೆ ಮಾತನಾಡಿದ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು "ಶ್ರೀರಾಮ ದಂಡಕಾರಣ್ಯ ಯಾತ್ರೆ ವೇಳೆಯಲ್ಲಿ ಈ ಸ್ಥಳದಲ್ಲಿ ಪಾದಸ್ಪರ್ಶ ಮಾಡಿರುವ ಇತಿಹಾಸವಿದೆ. ಶ್ರೀರಾಘವೇಂದ್ರ ಸ್ವಾಮಿಗಳು ಇಲ್ಲಿಯೇ ನೆಲೆಸಿರುವುದರಿಂದ ಮಂತ್ರಾಲಯ ಅತ್ಯಂತ ಪವಿತ್ರ ಸ್ಥಳವಾಗಿದೆ" ಎಂದು ಹೇಳಿದರು.

Foundation stone for installation of 108 feet statue of Lord Rama
ಶ್ರೀರಾಮನ ಪಂಚಲೋಹ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು

ಶ್ರೀರಾಮನ ಪಂಚಲೋಹ ಪ್ರತಿಮೆ ಸ್ಥಾಪನೆ ಮಾಡುವುದರ ಜೊತೆಯಲ್ಲಿ ಸುತ್ತಮುತ್ತ ಉದ್ಯಾನವನ ಹಾಗೂ ಮಕ್ಕಳಿಗೆ ಆಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪ್ರತಿಮೆ ಪ್ರತಿಷ್ಠಾಪನೆಗೆ ಆಗಮಿಸಲಿದ್ದಾರೆ ಎಂದು ಸುಬುಧೇಂದ್ರ ತೀರ್ಥರು ವಿಶ್ವಾಸ ವ್ಯಕ್ತಪಡಿಸಿದರು.

Foundation stone for installation of 108 feet statue of Lord Rama
ಶ್ರೀರಾಮನ ಪಂಚಲೋಹ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು

ಈ ವೇಳೆ ಆಂಧ್ರ ಪ್ರದೇಶದ ಕಾರ್ಮಿಕ ಖಾತೆ ಸಚಿವ ಪಿ. ಜಯರಾಂ, ಮಾಜಿ ಸಂಸದ ಟಿ. ಜಿ. ವೆಂಕಟೇಶ ಸೇರಿದಂತೆ ಮಠದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Foundation stone for installation of 108 feet statue of Lord Rama
ಶ್ರೀರಾಮನ ಪಂಚಲೋಹ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು

ಇದನ್ನೂ ಓದಿ: ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಪ್ರಸಾದ್ ಯೋಜನೆ: ಚಾಮುಂಡಿ ಬೆಟ್ಟ ಅಭಿವೃದ್ಧಿಗೆ 45.70 ಕೋಟಿ ಅನುದಾನಕ್ಕೆ ಒಪ್ಪಿಗೆ

Last Updated :Jul 23, 2023, 7:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.