ETV Bharat / state

ವಿದ್ಯಾರ್ಥಿನಿಯನ್ನ ಚಾಕುವಿನಿಂದ ಇರಿದು ಕೊಂದ ಯುವಕ.. ಬೆಚ್ಚಿಬಿದ್ದ ರಾಯಚೂರು

author img

By

Published : Feb 26, 2022, 1:12 PM IST

Updated : Feb 26, 2022, 4:06 PM IST

Student Murder In Raichur
Student Murder In Raichur

ಚಾಕುವಿನಿಂದ ಬಾಲಕಿಯ ಹೊಟ್ಟೆ ಹಾಗೂ ಕತ್ತನ್ನು ಸೀಳುವ ಮೂಲಕ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು: ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆಯೊಂದು ಜಿಲ್ಲೆಯಲ್ಲಿಂದು ನಡೆದಿದೆ. ವಿದ್ಯಾರ್ಥಿನಿಯನ್ನು ಚಾಕುವಿನಿಂದ ಇರಿದು ಯುವಕನೋರ್ವ ಹತ್ಯೆ ಮಾಡಿರುವ ಪ್ರಕರಣ ಜಿಲ್ಲೆಯ ಮಸ್ಕಿ ಪಟ್ಟಣದ ಹೊರವಲಯದ ಸಾನಬಾಳ ಕ್ರಾಸ್ ಬಳಿ ನಡೆದಿದೆ. ಭೂಮಿಕಾ(15) ಹತ್ಯೆಯಾದ ಬಾಲಕಿಯಾಗಿದ್ದಾಳೆ. ರಮೇಶ ಎಂಬಾತ ಕೊಲೆ ಮಾಡಿರುವ ಆರೋಪಿ ಎಂದು ಹೇಳಲಾಗುತ್ತಿದೆ.

ವಿದ್ಯಾರ್ಥಿನಿಯನ್ನ ಚಾಕುವಿನಿಂದ ಇರಿದು ಹತ್ಯೆ
ವಿದ್ಯಾರ್ಥಿನಿಯನ್ನ ಚಾಕುವಿನಿಂದ ಇರಿದು ಹತ್ಯೆ

ಚಾಕುವಿನಿಂದ ಬಾಲಕಿಯ ಹೊಟ್ಟೆ ಹಾಗೂ ಕತ್ತನ್ನು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಬಳಿಕ ಆರೋಪಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಪೊಲೀಸರ ಕಿರುಕುಳ, ನೆರೆಹೊರೆಯವರ ಚುಚ್ಚು ಮಾತು ಆರೋಪ.. ನೆಲಮಂಗಲದಲ್ಲಿ ಗೃಹಿಣಿ ಆತ್ಮಹತ್ಯೆ

ಪಟ್ಟಣದ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದಳು. ಘಟನಾ ಸ್ಥಳಕ್ಕೆ ಮಸ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಪೊಷಕರಿಗೆ ಒಪ್ಪಿಸಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

Last Updated :Feb 26, 2022, 4:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.