ETV Bharat / state

ಬಿಸಿಲನಾಡಲ್ಲಿ ಗುಡುಗು-ಮಿಂಚು ಸಹಿತ ಅಬ್ಬರಿಸಿದ ವರುಣ

author img

By

Published : Jun 10, 2020, 5:40 PM IST

ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರಿದಿದೆ. ರಾಯಚೂರಲ್ಲಿ ಇಂದು ಭಾರೀ ಮಳೆಯಾಗಿದ್ದು, ರಸ್ತೆ ಮೇಲೆ ನೀರು ಬಂದ ಕಾರಣ ವಾಹನ ಸವಾರರು ಪರದಾಡಬೇಕಾಯಿತು. ಅಲ್ಲದೆ ಮಳೆಯಿಂದಾಗಿ ಜಿಲ್ಲೆಯ ಕೃಷಿ ಚಟುವಟಿಕೆಗಳು ಚುರುಕು ಪಡೆಯುವ ಸಾಧ್ಯತೆಯಿದೆ.

Heavy rain in part of raichuru with thunder and lighting
ರಾಯಚೂರಲ್ಲಿ ಗುಡುಗು-ಮಿಂಚು ಸಹಿತ ಧಾರಕಾರ ಮಳೆ

ರಾಯಚೂರು: ಜಿಲ್ಲೆಯ ವಿವಿಧೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡಕವಿದ ವಾತಾವರಣ ಇತ್ತು. ಬಳಿಕ ಜಿಲ್ಲೆಯ ನಾನಾ ಕಡೆಗಳಲ್ಲಿ ಗುಡುಗು-ಮಿಂಚಿನನೊಂದಿಗೆ ವರುಣ ಅಬ್ಬರಿಸಿದ್ದಾನೆ.

ರಾಯಚೂರಲ್ಲಿ ಗುಡುಗು-ಮಿಂಚು ಸಹಿತ ಅಬ್ಬರಿಸಿದ ವರುಣ ವರುಣ

ಮಳೆ ನೀರಿನಿಂದ ತಗ್ಗು ಪ್ರದೇಶಗಳಿಗೆ ಅಲ್ಲಲ್ಲಿ ನೀರು ನುಗ್ಗಿದೆ. ಅಲ್ಲದೆ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವಂತಾಗಿತ್ತು.

ಜಿಲ್ಲೆಯ ರೈತರು ಬಿತ್ತನೆಗೆ ತಯಾರಿ ನಡೆಸುತ್ತಿದ್ದು, ಇಂದು ಸುರಿದ ಮಳೆಯಿಂದಾಗಿ ಕೃಷಿ ಚಟುವಟಿಕೆಗಳು ಇನ್ನಷ್ಟು ಚುರುಕು ಪಡೆದುಕೊಳ್ಳುವ ನಿರೀಕ್ಷೆ ಇದೆ.

ರಾಯಚೂರು: ಜಿಲ್ಲೆಯ ವಿವಿಧೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡಕವಿದ ವಾತಾವರಣ ಇತ್ತು. ಬಳಿಕ ಜಿಲ್ಲೆಯ ನಾನಾ ಕಡೆಗಳಲ್ಲಿ ಗುಡುಗು-ಮಿಂಚಿನನೊಂದಿಗೆ ವರುಣ ಅಬ್ಬರಿಸಿದ್ದಾನೆ.

ರಾಯಚೂರಲ್ಲಿ ಗುಡುಗು-ಮಿಂಚು ಸಹಿತ ಅಬ್ಬರಿಸಿದ ವರುಣ ವರುಣ

ಮಳೆ ನೀರಿನಿಂದ ತಗ್ಗು ಪ್ರದೇಶಗಳಿಗೆ ಅಲ್ಲಲ್ಲಿ ನೀರು ನುಗ್ಗಿದೆ. ಅಲ್ಲದೆ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವಂತಾಗಿತ್ತು.

ಜಿಲ್ಲೆಯ ರೈತರು ಬಿತ್ತನೆಗೆ ತಯಾರಿ ನಡೆಸುತ್ತಿದ್ದು, ಇಂದು ಸುರಿದ ಮಳೆಯಿಂದಾಗಿ ಕೃಷಿ ಚಟುವಟಿಕೆಗಳು ಇನ್ನಷ್ಟು ಚುರುಕು ಪಡೆದುಕೊಳ್ಳುವ ನಿರೀಕ್ಷೆ ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.