ETV Bharat / state

ರಾಯಚೂರಿನ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

author img

By

Published : Sep 26, 2022, 7:49 PM IST

Horrible road accident in Raichur
Horrible road accident in Raichur

ಭೀಕರ ರಸ್ತೆ ಅಪಘಾತಲ್ಲಿ ಯುವಕರಿಬ್ಬರು ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಾಯಚೂರು: ಭೀಕರ ರಸ್ತೆ ಅಪಘಾತದಲ್ಲಿ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರಿನ‌ ಮರ್ಚೇಡ್ ಗ್ರಾಮದ ಜರುಗಿದೆ. ಗ್ರಾಮದ ಹೊರವಲಯದ ತಿರುವಿನಲ್ಲಿ ಬೈಕ್​​ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ನಗರದ ಚಂದ್ರಬಂಡಾ ರಸ್ತೆಯಲ್ಲಿನ ರಘುನಾಥನಹಳ್ಳಿಯ ಹೊನ್ನಪ್ಪ ಈರಣ್ (22) ಮತ್ತು ಎಲ್‌ಬಿಎಸ್ ಬಡವಣೆಯ ನಿವಾಸಿ ಹುಸೇನ್ ಚಂದಪಾಷಾ(21) ಮೃತ ಯುವಕರೆಂದು ಗುರುತಿಸಲಾಗಿದೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು, ಆತನ ಗುರುತು ಪತ್ತೆಯಾಗಿಲ್ಲ.

Horrible road accident in Raichur
ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕರು

ಮರ್ಚೇಡ್ ಗ್ರಾಮದಿಂದ ರಾಯಚೂರಿಗೆ ಬರುವಾಗ ಗ್ರಾಮದ ಹೊರವಲಯದ ರಸ್ತೆಯ ತಿರುವಿನಲ್ಲಿ ಈ ದುರಂತ ಸಂಭವಿಸಿದೆ. ಸುದ್ದಿ ತಿಳಿದು ಸ್ಥಳಕ್ಕೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗೋಕಾಕ್​ನ ಶಾಲೆಯಲ್ಲಿ ಸಿಲಿಂಡರ್ ಸ್ಫೋಟ.. ಧಾನ್ಯ, ಸಾಮಗ್ರಿ ಭಸ್ಮ; ತಪ್ಪಿದ ಭಾರಿ ಅನಾಹುತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.