ETV Bharat / state

ಕಲುಷಿತ ನೀರು ಸೇವಿಸಿ ಸಾವು ಪ್ರಕರಣ: ರಾಯಚೂರು ಜಿಪಂ ಸಿಇಒಗೆ ನೋಟೀಸ್​

author img

By

Published : May 31, 2023, 6:59 PM IST

Updated : May 31, 2023, 8:25 PM IST

Zilla Panchayat CEO Sashidhar Kurer
ಜಿಲ್ಲಾ ಪಂಚಾಯತಿ ಸಿಇಒ ಶಶಿಧರ್ ಕುರೇರ್​

ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ ಪ್ರಕರಣ ಸಂಬಂಧಿಸಿದ ಹಿನ್ನೆಲೆ ನೀರಿನ ಪರೀಕ್ಷೆ ನಡೆಸಲಾಗಿದೆ. ಜನರು ಸೇವಿಸಿದ ನೀರು ಕುಡಿಯಲು ಯೋಗವಲ್ಲ ಎಂಬುದು ವರದಿಯಿಂದ ಬಯಲಾಗಿದೆ‌. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಗೊರಬಾಳ ಗ್ರಾಮದ ಎರಡು ಬೋರ್​ವೆಲ್​ಗಳ ನೀರು ಅನ್​​ಫಿಟ್ ಎಂದು ವರದಿಯಲ್ಲಿ ತಿಳಿಸಲಾಗಿದೆ.

ರಾಯಚೂರು: ರೇಕಲಮರಡಿ ಹಾಗೂ ಗೊರೆಬಾಳ ಗ್ರಾಮದ ಕಲುಷಿತ ನೀರು ಸೇವಿಸಿ ಸಾವು ಪ್ರಕರಣದ ಹಿನ್ನೆಲೆಯಲ್ಲಿ ತಪ್ಪಿತಸ್ಥ ಗ್ರಾಮ ಪಂಚಾಯತಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿ, ರಾಯಚೂರು ಜಿಪಂ ಸಿಇಒಗೆ ನೋಟೀಸ್​ ಜಾರಿಗೊಳಿಸಲಾಗಿದೆ. ಹೌದು, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ್ ಕುರೇರ್​ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿದ್ದು, ಒಂದು ವಾರದೊಳಗೆ ನೋಟಿಸ್​ಗೆ ಉತ್ತರಿಸಲು ಸೂಚಿಸಲಾಗಿದೆ.

ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಓರ್ವ ಬಾಲಕ ಮೃತಪಟ್ಟಿದ್ದ, ಲಿಂಗಸೂಗೂರು ತಾಲೂಕಿನ ಗೊರೆಬಾಳದಲ್ಲಿ ಹಲವರು ಅಸ್ವಸ್ಥಗೊಂಡಿದ್ದರು. ಈ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ವರದಿ ನೀಡಿದ್ದ ರಾಯಚೂರು ಜಿಲ್ಲಾ ಪ್ರಾದೇಶಿಕ ಮಾಲಿನ್ಯ ನಿಯಂತ್ರಣ ಅಧಿಕಾರಿ, ಜಲ ಕಾಯ್ದೆ 1974ರ ಸೆಕ್ಷನ್ 24 & 25 ಅಡಿ, ಜಲ ಮೂಲ ಕಲಿಷಿತಗೊಳಿಸಿರುವ ಅಪರಾಧ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದೇ ವರದಿ ಆಧರಿಸಿ ತಪ್ಪಿತಸ್ಥ ಗ್ರಾಮ ಪಂಚಾಯಿತಿಗಳ ವಿರುದ್ಧ ಕ್ರಮಕ್ಕೆ ಸೂಚನೆಗೆ ನೋಟಿಸ್ ನೀಡಲು ನಿರ್ದೇಶನ ನೀಡಲಾಗಿದ್ದು, ರೇಕಲಮರಡಿಯ ಜಾಗೀರ ಜಾಡಲದಿನ್ನಿ ಗ್ರಾಮ ಪಂಚಾಯತ್, ಗೊರೆಬಾಳ ಗ್ರಾಮ ಪಂಚಾಯಿತಿ ಆಡಳಿತದ ವರ್ಗದ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ.

Zilla Panchayat CEO Sashidhar Kurer
ಜಿಲ್ಲಾ ಪಂಚಾಯತಿ ಸಿಇಒ ಶಶಿಧರ್ ಕುರೇರ್​ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿದೆ.

ಈ ನೀರು ಕುಡಿಯಲು ಯೋಗ್ಯವಿಲ್ಲ: ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ ಪ್ರಕರಣ ಸಂಬಂಧಿಸಿದ ಹಿನ್ನೆಲೆ ನೀರಿನ ಪರೀಕ್ಷೆ ನಡೆಸಲಾಗಿದೆ. ಜನರು ಸೇವಿಸಿದ ನೀರು ಕುಡಿಯಲು ಯೋಗವಲ್ಲ ಎಂಬುದು ವರದಿಯಿಂದ ಬಯಲಾಗಿದೆ‌. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಗೊರಬಾಳ ಗ್ರಾಮದ ಎರಡು ಬೋರ್​ವೆಲ್​ಗಳ ನೀರು ಅನ್​​ಫಿಟ್ ಎಂದು ವರದಿಯಲ್ಲಿ ತಿಳಿಸಲಾಗಿದೆ. ಸಂಶೋಧಕರು ನಡೆಸಿದ ನೀರಿನ ಪರೀಕ್ಷೆಯಿಂದ ಈ ಸತ್ಯ ತಿಳಿದಿದೆ. ಕುಡಿಯಲು ಯೋಗ್ಯವಲ್ಲದ ನೀರನ್ನು ಗ್ರಾಮಸ್ಥರಿಗೆ ಪೂರೈಕೆ ಮಾಡುವ ಮೂಲಕ ಗೊರಬಾಳ ಗ್ರಾಪಂ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಿದೆ. ಸದ್ಯ ಬೋರ್ ವೆಲ್ ನೀರು ಸೇವಿಸುವುದನ್ನು ಸ್ಥಗಿತಗೊಳಿಸಿದ್ದರಿಂದ ಈ ಭಾಗದ ಜನರ ಆರೋಗ್ಯದಲ್ಲಿ ಚೇತರಿಕೆ ಆಗುತ್ತಿದ್ದಾರೆ‌.

5 ಲಕ್ಷ ರೂಪಾಯಿ ಪರಿಹಾರ: ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ 5 ವರ್ಷದ ಹನುಮಂತ ಎಂಬ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಮುಕ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ (ಪರಿಹಾರ ನಿಧಿ ಶಾಖೆ) ತಿಳಿಸಿದ್ದಾರೆ. ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದರು.

ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ: ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಗೀರ ಜಾಡಲದಿನ್ನಿ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ದೂರು ದಾಖಲಿಸಲಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿಯಲ್ಲಿ ಕಲುಷಿತ ನೀರು ಸೇವನೆಯಿಂದ 30ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು, ಮೂರು ವರ್ಷದ ಹನುಮೇಶ ಎಂಬ ಬಾಲಕ ಸಾವನ್ನಪ್ಪಿದ್ದ. ಈ ಪ್ರಕರಣದ ಕುರಿತು ಗ್ರಾಮ ಪಂಚಾಯಿತಿಯ ಪಿಡಿಒ ರೇಣುಕಾ ವಿರುದ್ಧ ಮೃತ ಬಾಲಕನ ತಂದೆ ಈರಪ್ಪ ಪೊಲೀಸರಿಗೆ ದೂರು ಕೊಟ್ಟಿದ್ದರು.

ಸಿರವಾರ - ದೇವದುರ್ಗ ರಸ್ತೆಯಲ್ಲಿ ಬರುವ ರೇಕಲಮರಡಿ ಗ್ರಾಮಕ್ಕೆ ಪೂರೈಕೆ ಮಾಡುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದಿದೆ. ಪರಿಣಾಮ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸೇರುತ್ತಿದ್ದು, ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಮನವಿ ಮಾಡಲಾಗಿತ್ತು ಎಂದು ಈ ಬಗ್ಗೆ ಗ್ರಾಮ ಪಂಚಾಯಿತಿ ಪಿಡಿಒ ರೇಣುಕಾರಿಗೆ ಗಮನಕ್ಕೆ ತರಲಾಗಿತ್ತು.

ಆದರೆ, ಪಿಡಿಒ ಈ ಬಗ್ಗೆ ನಿರ್ಲಕ್ಷ್ಯವಹಿಸಿದ್ದರಿಂದ, ನನ್ನ ಮಗನು ಕಲುಷಿತ ನೀರು ಸೇವಿಸಿದ ಪರಿಣಾಮ ವಾಂತಿ, ಭೇದಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ನನ್ನ ಮಗಳು ಸಹ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದಳೆ. ಗ್ರಾಮದ ಹಲವು ಜನರು ಅಸ್ವಸ್ಥ ಆಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: ಕೆರೆಗೆ ಕೊಳಚೆ ನೀರು ಹರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಈಶ್ವರ ಖಂಡ್ರೆ

Last Updated :May 31, 2023, 8:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.