ರಾಯಚೂರು: ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ ನಡೆಯುತ್ತಿದೆ. ಆದ್ರೆ, ಜನರಿಗೆ ಲಸಿಕೆ ಪಡೆಯುವಂತೆ ಮನವೊಲಿಸುವುದು ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಜಿಲ್ಲೆಯ ದೇವದುರ್ಗ ಬುಂಕಲದೊಡ್ಡಿ ಗ್ರಾಮದ ಅಜ್ಜಿಯೊಬ್ಬರಿಗೆ ಲಸಿಕೆ ಹಾಕಿಕೊಳ್ಳುವಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹೇಳಿದ್ದಾರೆ. ಇದಕ್ಕೆ ತಕರಾರು ತೆಗೆದಿರುವ ಅಜ್ಜಿ, 'ನನಗೆ ಡಾಕ್ಟರ್ ಲೆಟರ್ನಲ್ಲಿ ಬರೆದುಕೊಡಬೇಕು ಅಂಥ ಪಟ್ಟು ಹಿಡಿದು ಲಸಿಕೆ ಹಾಕಿಸಿಕೊಳ್ಳುವುದಿಲ್ಲ' ಎಂದರು.
ಕೊನೆಗೆ ಆರೋಗ್ಯ ಸಿಬ್ಬಂದಿ ಅಜ್ಜಿಯ ಮನವೊಲಿಸುವಲ್ಲಿ ಯಶಸ್ವಿಯಾದರು. ರೊಟ್ಟಿ ಮಾಡಿ ಉಂಡು ಆಮೇಲೆ ಆಧಾರ್ ಕಾರ್ಡ್ ತೆಗೆದುಕೊಂಡು ಬರಲು ಅವರು ಒಪ್ಪಿಗೆ ಸೂಚಿಸಿದರು.
ಇದನ್ನೂ ಓದಿ: ಪ್ರತಿಪಕ್ಷಗಳಿಗೆ ಶಕ್ತಿ ತಂತ್ರಗಾರಿಕೆ ಇರುತ್ತದೆ, ಹಗುರವಾಗಿ ತೆಗೆದುಕೊಳ್ಳಬೇಡಿ: ಕಾರ್ಯಕರ್ತರಿಗೆ ಬಿಎಸ್ವೈ ಸಂದೇಶ