Raichur rain: ಹಟ್ಟಿ ಗ್ರಾಮಸ್ಥರಿಂದ ಯುವಕನ ರಕ್ಷಣೆ

author img

By

Published : Aug 4, 2022, 8:21 AM IST

man rescued from flood water in Raichur, Heavy rain in Raichur, Raichur news, ರಾಯಚೂರು ಜಿಲ್ಲೆಯಾದ್ಯಂತ ಭಾರೀ ಮಳೆ, ರಾಯಚೂರು ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತ, ಹಟ್ಟಿ ಗ್ರಾಮಸ್ಥರಿಂದ ಯುವಕನ ರಕ್ಷಣೆ,

Raichur rain: ರಾಯಚೂರು ಜಿಲ್ಲಾದ್ಯಂತ ಭಾರಿ ಮಳೆ ಮುಂದುವರಿದೆ. ವರುಣನ ಆರ್ಭಟಕ್ಕೆ ಅಲ್ಲಲ್ಲಿ ಅವಘಡಗಳು ಸಂಭವಿಸುತ್ತಿವೆ. ಮಳೆಯಿಂದಾಗಿ ಹಳ್ಳಗಳು ತುಂಬಿ ಹರಿಯುತ್ತಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು ರಕ್ಷಿಸಿರುವ ಘಟನೆ ಹಟ್ಟಿಯಲ್ಲಿ ನಡೆದಿದೆ.

ರಾಯಚೂರು: ಬಿಸಿಲೂರು ರಾಯಚೂರು ಜಿಲ್ಲಾದ್ಯಂತ ಭಾರೀ ಮಳೆ ಹಿನ್ನೆಲೆ ಹಳ್ಳ - ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮದ ಯುವಕನೊಬ್ಬ ಹುಚ್ಚಾಟ ಆಡುತ್ತಾ ಸಂಕಷ್ಟಕ್ಕೆ ಸಿಲುಕಿರುವ ಪ್ರಸಂಗ ಬೆಳಕಿಗೆ ಬಂದಿದೆ.

ಗ್ರಾಮಸ್ಥರಿಂದ ಯುವಕನ ರಕ್ಷಣೆ: ಸಂಗಿತಂ ಎಂಬ ಯುವಕ ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ಆಟವಾಡುತ್ತಿದ್ದನು. ಈ ವೇಳೆ, ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದನು. ಆಗ ಯುವಕ ಮರದ ಆಸರೆ ಪಡೆದು, ಸಹಾಯಕ್ಕಾಗಿ ಜೋರಾಗಿ ಕಿರುಚಿದ್ದಾನೆ. ಯುವಕನ ಕೂಗಾಟ ಕೇಳಿದ ಗ್ರಾಮಸ್ಥರು ಸಹಾಯಕ್ಕೆ ದೌಡಾಯಿಸಿದರು. ಹರಿಯುತ್ತಿರುವ ನೀರಿನಲ್ಲಿ ಹಗ್ಗದ ಸಹಾಯದಿಂದ ಗ್ರಾಮಸ್ಥರು ಯುವಕನನ್ನು ರಕ್ಷಣೆ ಮಾಡಿದರು.

ಈ ಘಟನೆ ಬಳಿಕ ಯುವಕನಿಗೆ ಬೈದು ಬುದ್ದಿ ಹೇಳಿದ ಪೋಷಕರು ರಕ್ಷಣೆ ಮಾಡಿದವರಿಗೆ ಕೃತ್ಞನ ಸಲ್ಲಿಸಿದರು. ಕೆಲವು ಕಡೆ ಮಳೆಯಿಂದಾಗಿ ಗದ್ದೆಗಳಿಗೆ ನೀರು ಹರಿದು ರೈತರ ಬೆಳೆ ನಷ್ಟವಾಗಿದೆ. ಇದರಿಂದಾಗಿ ರೈತರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಮಳೆಯಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಓದಿ: ಕಲಬುರಗಿಯಲ್ಲಿ ಭಾರೀ ಮಳೆ : 200 ಮಕ್ಕಳು ಶಾಲಾ ಸಿಬ್ಬಂದಿ ರಕ್ಷಿಸಿದ ಗ್ರಾಮಸ್ಥರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.