ರಾಯಚೂರು: ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ರೋಗಿಗೆ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಚಿಕಿತ್ಸೆ ನೀಡಿದ್ದಾರೆ.
ನಗರದ ಹೊರವಲಯದಲ್ಲಿರುವ ರಿಮ್ಸ್ ಆಸ್ಪತ್ರೆಯಲ್ಲಿ ಮಡಿವಾಳಪ್ಪ ಎನ್ನುವವರಿಗೆ ಕಫ ಕಟ್ಟಿ ಉಸಿರಾಟದಲ್ಲಿ ತೊಂದರೆಯಾಗಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ವಿಚಾರ ತಿಳಿದ ಕೂಡಲೆ ಸ್ಪಂದಿಸಿದ ಶಾಸಕ ಡಾ.ಶಿವರಾಜ್ ಪಾಟೀಲ್, ರಿಮ್ಸ್ ಆಸ್ಪತ್ರೆಗೆ ತೆರಳಿ ರೋಗಿಗೆ ಚಿಕಿತ್ಸೆ ನೀಡಿ, ಬಳಿಕ ಮುಂದಿನ ಚಿಕಿತ್ಸೆಗೆ ಶೂಶ್ರೂಷಕರಿಗೆ ಸೂಚಿಸಿದರು.
ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಾ.ಶಿವರಾಜ್ ಪಾಟೀಲ್, ಹೃದಯ ತಜ್ಞರಾಗಿ ಹೆಸರುವಾಸಿಯಾಗಿದ್ದರು. ಶಾಸಕರಾಗಿ ಆಯ್ಕೆಯಾದಮೇಲೆ ವೃತ್ತಿಯನ್ನು ಬಿಟ್ಟಿದ್ದರು. ಇದೀಗ ಉಸಿರಾಟ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಗೆ ತೊಂದರೆ ಅನುಭವಿಸುತ್ತಿದ್ದ ರೋಗಿಗೆ ಚಿಕಿತ್ಸೆ ನೀಡುವ ಮೂಲಕ ಮಾನವೀಯತೆ ಮೆರದಿದ್ದಾರೆ.