ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ: ಓರ್ವ ವ್ಯಕ್ತಿ, ಎತ್ತು ಸಾವು

author img

By

Published : Nov 26, 2022, 3:19 PM IST

road-accident-in-raichur

ಗೋವಾದಿಂದ ವಿಜಯವಾಡಕ್ಕೆ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ಎತ್ತುಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಒಬ್ಬ ವ್ಯಕ್ತಿ ಮತ್ತು ಎತ್ತು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು : ಗೋವಾದಿಂದ ವಿಜಯವಾಡಕ್ಕೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎತ್ತುಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಓರ್ವ ವ್ಯಕ್ತಿ ಮತ್ತು ಎತ್ತು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಬಾಲಾಜಿ ಕ್ಯಾಂಪ್‌ ಬಳಿ ನಡೆದಿದೆ.

ವಿಜಯವಾಡದ ಆಯೋಧ್ಯನಗರ ನಿವಾಸಿ ತನುಭುತ್ರಿ ಸುಬ್ಬರೆಡ್ಡಿ (55) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಕಲ್ಲೂರು ಗ್ರಾಮದ ಸೋಮಪ್ಪ ಎಂಬವರ ಎರಡು ಎತ್ತುಗಳ ಪೈಕಿ ಒಂದು ಎತ್ತು ಸ್ಥಳದಲ್ಲೇ ಮೃತಪಟ್ಟಿದೆ.

ವಿಜಯವಾಡದ ನಾಲ್ವರು ಗೋವಾದಿಂದ ಊರಿಗೆ ಮರಳುತ್ತಿದ್ದರು. ಈ ವೇಳೆ, ಮಾನವಿ ದಟ್ಟಿ ಬಾಲಾಜಿ ಕ್ಯಾಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎದುರಿಗೆ ಬರುತ್ತಿದ್ದ ಎರಡು ಎತ್ತುಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಸುಬ್ಬರೆಡ್ಡಿ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಡಿವೈಡರ್​ಗೆ ಡಿಕ್ಕಿ ಹೊಡೆದು ಮತ್ತೊಂದು ಬದಿಗೆ ಹಾರಿದ ಕಾರು.. ನೆಲಮಂಗಲ ಸರಣಿ ಅಪಘಾತದಲ್ಲಿ ಮೂರು ಕಾರು ಜಖಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.