ETV Bharat / state

14ರಿಂದ ಕಾಗಿನೆಲೆಯಿಂದ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ : ಕೆ ಎಸ್ ಈಶ್ವರಪ್ಪ

author img

By

Published : Jan 4, 2021, 1:07 PM IST

Statement by KS Eshwarappa On Scheduled Tribes Reservation for the Kuruba Community
ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ

ಸ್ವಾತಂತ್ರ ಪೂರ್ವದಲ್ಲಿ ಕುರುಬರು ಎಸ್ಟಿ ಪಟ್ಟಿಯಲ್ಲಿದ್ದರು. ಸ್ವಾತಂತ್ರ ಬಂದ ಬಳಿಕ ಕೆಲ ಬದಲಾವಣೆಗಳಾಗಿವೆ. ರಾಜಕೀಯ ಒತ್ತಡವಿಲ್ಲದೇ ಇರೋದ್ರಿಂದ ಕುರುಬರಿಗೆ ಮೀಸಲಾತಿ ದೊರೆತಿಲ್ಲ. ಹೀಗಾಗಿ ಜನಜಾಗೃತಿ ಮಾಡುತ್ತಿದ್ದೇವೆ. ಮಾಜಿ ಸಚಿವ ಬಂಡೆಪ್ಪ ಕಾಶಂಪೂರ ಸಚಿವರಾಗಿದ್ದ ಸಮಯದಲ್ಲಿ ಕುಲಶಾಸ್ತ್ರ ಅಧ್ಯಯನಕ್ಕೆ ನೀಡಲಾಗಿದೆ..

ರಾಯಚೂರು : ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಮೀಸಲಾತಿಗೆ ಆಗ್ರಹಿಸಿ ಕಾಗಿನೆಲೆಯ ಜಗದ್ಗುರುಗಳ ನೇತೃತ್ವದಲ್ಲಿ ಜನಜಾಗೃತಿ ಆರಂಭವಾಗಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಜಿಲ್ಲೆಯ ಸಿಂಧನೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಲಬುರಗಿ ವಿಭಾಗ ಮಟ್ಟದ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿರುವ ಸಮಾವೇಶದಲ್ಲಿ ‌ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.

ಜನ ಪ್ರತಿನಿಧಿಗಳು, ಮಹಿಳೆಯರು, ಸಮಾಜದ ಒಡೆಯರ್ ಹಾಗೂ ವಿಭಾಗೀಯ ಮಟ್ಟದ ಸಮಾವೇಶಗಳು ನಡೆದಿವೆ. 6ಕ್ಕೆ ದಾವಣಗೆರೆ, 7ಕ್ಕೆ ಶಿಕಾರಿಪುರದಲ್ಲಿ ಸಮಾವೇಶಗಳನ್ನ ಏರ್ಪಡಿಸಲಾಗಿದೆ. ಬರುವ 14ರಿಂದ ಕಾಗಿನೆಲೆಯಿಂದ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ ಆಯೋಜಿಸಲಾಗಿದ್ದು, ನಿರೀಕ್ಷೆಗೂ ಮೀರಿ ಜನ ಸೇರುತ್ತಾರೆ. ಕೇಂದ್ರದ ಸಚಿವರನ್ನ ಭೇಟಿ ಮಾಡಿ ಬಂದಿದ್ದೇವೆ. ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದ್ದು, ವರದಿ ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿವೆ ಎಂದರು.

ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ

ಓದಿ : ಹಾವೇರಿ: ಶಾಲೆ ಆರಂಭವಾದ ಬೆನ್ನಲ್ಲೇ ಇಬ್ಬರು ಶಿಕ್ಷಕರಿಗೆ ಕೊರೊನಾ ದೃಢ

ಸ್ವಾತಂತ್ರ ಪೂರ್ವದಲ್ಲಿ ಕುರುಬರು ಎಸ್ಟಿ ಪಟ್ಟಿಯಲ್ಲಿದ್ದರು. ಸ್ವಾತಂತ್ರ ಬಂದ ಬಳಿಕ ಕೆಲ ಬದಲಾವಣೆಗಳಾಗಿವೆ. ರಾಜಕೀಯ ಒತ್ತಡವಿಲ್ಲದೇ ಇರೋದ್ರಿಂದ ಕುರುಬರಿಗೆ ಮೀಸಲಾತಿ ದೊರೆತಿಲ್ಲ. ಹೀಗಾಗಿ ಜನಜಾಗೃತಿ ಮಾಡುತ್ತಿದ್ದೇವೆ. ಮಾಜಿ ಸಚಿವ ಬಂಡೆಪ್ಪ ಕಾಶಂಪೂರ ಸಚಿವರಾಗಿದ್ದ ಸಮಯದಲ್ಲಿ ಕುಲಶಾಸ್ತ್ರ ಅಧ್ಯಯನಕ್ಕೆ ನೀಡಲಾಗಿದೆ.

ಎಸ್ಟಿ ಹೋರಾಟಕ್ಕೂ ಆರ್‌ಎಸ್‌ಎಸ್‌ಗೂ ಸಂಬಂಧವಿಲ್ಲ. ಇಡೀ ರಾಜ್ಯದಲ್ಲಿ ಹೋರಾಟಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಸ್ವತಃ ಶ್ರೀಗಳೇ ಸಿದ್ದರಾಮಯ್ಯನವರ ಮನೆಗೆ ಹೋಗಿ ಬಂದಿದ್ದಾರೆ. ಅವರು ಯಾವುದೇ ವಿರೋಧ ಇಲ್ಲ ಎಂದು ಹೇಳಿದ್ದಾರೆ. ನಾನೂ ಕೂಡ ಅವರನ್ನ ಕರೆದಿದ್ದೇನೆ. ಬರೋದು ಬಿಡೋದು ಅವರಿಗೆ ಬಿಟ್ಟಿದ್ದು, ಎಸ್ಟಿ ಮೀಸಲಾತಿ ಪಡೆಯುವ ಎಲ್ಲಾ ಅರ್ಹತೆ ನಮಗಿದೆ ಎಂದರು‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.