ETV Bharat / state

ಬೈಕ್​ಗೆ ಡಿಕ್ಕಿ ಹೊಡೆದ ಟಿಪ್ಪರ್​.. ಅಪಘಾತದಲ್ಲಿ ಇಬ್ಬರ ದುರ್ಮರಣ

author img

By

Published : Dec 25, 2022, 5:41 PM IST

ರಾಯಚೂರಿನಲ್ಲಿ ಬೈಕ್​ಗೆ ಟಿಪ್ಪರ್​ ಡಿಕ್ಕಿ- ಬೈಕ್​ ಸವಾರರಾದ ಮುದಿಯಪ್ಪ, ಹುಲಿಗೆಯ್ಯ ಸಾವು- ಸಿಂಧನೂರು ತಾಲೂಕಿನ ಸಾಸಲಮರಿ ಗ್ರಾಮದ ಬಳಿ ಅಪಘಾತ.

ರಸ್ತೆ ಅಪಘಾತ
ರಸ್ತೆ ಅಪಘಾತ

ರಾಯಚೂರು: ಟಿಪ್ಪರ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಸಾಸಲಮರಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.

ಸಾಸಲಮರಿ ಗ್ರಾಮದ ಮುದಿಯಪ್ಪ (42), ಹುಲಿಗೆಯ್ಯ(63) ಮೃತರೆಂದು ಗುರುತಿಸಲಾಗಿದೆ. ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಮತ್ತೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ರಾಯಚೂರು: ಲಾರಿ ಹರಿದು ಬಳೆ ವ್ಯಾಪಾರಿ ಸಾವು

ಸಾಸಲಮರಿ ಗ್ರಾಮದಿಂದ ಸಿಂಧನೂರಿಗೆ ಬರುತ್ತಿದೆ ಬೈಕ್​ಗೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಪ್ಪರ್ ಬೈಕ್ ಸವಾರರ ಮೇಲೆ ಹರಿದಿದೆ. ಟಿಪ್ಪರ್ ಹಿಂದಿನ ಗಾಲಿಯಲ್ಲಿ ಇಬ್ಬರು ಸಿಲುಕಿದ್ದರಿಂದ ಜೆಸಿಬಿ ಸಹಾಯದಿಂದ ಟಿಪ್ಪರ್ ಮೇಲಕ್ಕೆ ಎತ್ತಿ ಇಬ್ಬರನ್ನು ಹೊರತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಸಿಂಧನೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆ ರವಾನಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.