ETV Bharat / state

ರಾಯಚೂರಲ್ಲಿ ಭೀಕರ ರಸ್ತೆ ಅಪಘಾತ : ಯುವಕರಿಬ್ಬರ ಅಂಗಾಂಗಗಳು ಛಿದ್ರ ಛಿದ್ರ

author img

By

Published : Jun 26, 2022, 3:08 PM IST

Updated : Jun 26, 2022, 3:21 PM IST

ಟ್ಯಾಂಕರ್ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನ ಹೊರವಲಯದಲ್ಲಿ ನಡೆದಿದೆ.

two-youths-died-in-road-accident-in-rayachur
ಭೀಕರ ರಸ್ತೆ ಅಪಘಾತ : ಯುವಕರಿಬ್ಬರ ದಾರುಣ ಸಾವು

ರಾಯಚೂರು : ಟ್ಯಾಂಕರ್ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದು ಯುವಕರಿಬ್ಬರು ಸಾವನ್ನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ಮರ್ಚಡ್ ಕ್ರಾಸ್ ಬಳಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್‌ನಲ್ಲಿದ್ದ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ಯುವಕರ ದೇಹದ ಅಂಗಾಂಗಗಳು ಛಿದ್ರ ಛಿದ್ರವಾಗಿ ರಸ್ತೆ ಮೇಲೆ ಬಿದ್ದಿವೆ.

ಮೃತರನ್ನು ರಾಯಚೂರು ತಾಲೂಕಿನ ತಿಮ್ಮಾಪುರ ಗ್ರಾಮದ ತಿಪ್ಪಣ್ಣ(18) ಹಾಗೂ ಲಿಂಗಪ್ಪ(18) ಎಂದು ಗುರುತಿಸಲಾಗಿದೆ. ಉದಯ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಭೀಕರ ರಸ್ತೆ ಅಪಘಾತ : ಯುವಕರಿಬ್ಬರ ದಾರುಣ ಸಾವು

ಡಿಕ್ಕಿ ಹೊಡೆದ ಟ್ಯಾಂಕರ್ ಲಾರಿ ಛತ್ತೀಸ್‌ಗಡ ರಾಜ್ಯಕ್ಕೆ ಸೇರಿದ್ದು ಎನ್ನಲಾಗ್ತಿದ್ದು, ಚಾಲಕ ಪರಾರಿಯಾಗಿದ್ದಾನೆ.

ಇದನ್ನೂ ಓದಿ :ಬಾವಿಗೆ ಬಿದ್ದ ಯುವಕನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ: ವಿಡಿಯೋ ನೋಡಿ

Last Updated :Jun 26, 2022, 3:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.