ರಾಯಚೂರು: ಮಾಲ್​ನಿಂದ ಹೊರಬರುತ್ತಿದ್ದ ಯುವಕನ ಮೇಲೆ ಮನಸೋಇಚ್ಛೆ ಹಲ್ಲೆ

author img

By

Published : Sep 4, 2022, 1:55 PM IST

Young man suddenly attacked while coming from mall

ನಗರದ ರಿಲಯನ್ಸ್ ಮಾರ್ಟ್ ಮುಂದೆ ಕಳೆದ ವಾರ ಈ ಘಟನೆ ನಡೆದಿದೆ.

ರಾಯಚೂರು: ಮಾಲ್​‌ನಿಂದ ಹೊರ ಬರುತ್ತಿದ್ದ ಯುವಕನ ಮೇಲೆ ಏಕಾಏಕಿ ಹಲ್ಲೆ ಮಾಡಿದ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ನಗರದ ರಿಲಯನ್ಸ್ ಮಾರ್ಟ್ ಮುಂದೆ ಕಳೆದ ವಾರ ಘಟನೆ ನಡೆದಿದೆ. ಮಾಲ್​ನಿಂದ ಬೈಕ್ ಮೇಲೆ ಹೊರ ಬರುತ್ತಿದ್ದ ವ್ಯಕ್ತಿಯ ಮೇಲೆ ಯುವಕರು ಮನಬಂದಂತೆ ಥಳಿಸಿದ್ದಾರೆ. ನಂತರ ನಿರ್ಮಾಣ ಹಂತದ ಕಟ್ಟಡದ ಒಳಗಡೆ ಕರೆದೊಯ್ದು ಅಲ್ಲಿಯೂ ಹಲ್ಲೆ ನಡೆಸಿ, ಅಜ್ಞಾತ ಸ್ಥಳದಲ್ಲಿ ಮದ್ಯ​ ಕುಡಿಸಿದ್ದಾರೆ.

ಮಾಲ್​ನಿಂದ ಹೊರಬರುತ್ತಿದ್ದ ಯುವಕನ ಮೇಲೆ ಏಕಾಏಕಿ ಹಲ್ಲೆ

ಸಂಕೇತ್ ಹಲ್ಲೆಗೊಳಗಾದ ಯುವಕ. ಆರೋಪಿಗಳನ್ನು ಅಭಿಷೇಕ್ ಹಾಗೂ ಮತ್ತು ಆತನ ನಾಲ್ವರು ಸ್ನೇಹಿತರು ಎಂದು ಹೇಳಲಾಗುತ್ತಿದೆ. ಸದರ್ ಬಜಾರ್ ಪೊಲೀಸರು ಅಭಿಷೇಕ್​ನನ್ನು ಬಂಧಿಸಿದ್ದು, ಉಳಿದವರಿಗೆ ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪುಟ್ಟ ಮಕ್ಕಳಿಗೆ ವಿಷವುಣಿಸಿ ತಾನೂ ಸಾವಿಗೆ ಶರಣಾದ ರೈತ ಸಂಘದ ಅಧ್ಯಕ್ಷನ ಪತ್ನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.