ಜೆಡಿಎಸ್ ಸೆರ್ಪಡೆಗೊಂಡ ಹೆಚ್ ಡಿ ಕೋಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡ..

author img

By

Published : Oct 2, 2021, 4:02 PM IST

ಜೆಡಿಎಸ್ ಸೆರ್ಪಡೆಗೊಂಡ ಕಾಂಗ್ರೆಸ್ ಮುಖಂಡ

ಕಳೆದ 2 ವರ್ಷಗಳಿಂದ ಕಾಂಗ್ರೆಸ್ ಪಕ್ಷದಿಂದ ದೂರವೇ ಉಳಿದಿದ್ದ ಕೃಷ್ಣ ನಾಯಕ್, ಇಂದು ಅಧಿಕೃತವಾಗಿ ಜೆಡಿಎಸ್ ಪಕ್ಷವನ್ನ ಸೇರ್ಪಡೆಯಾಗಿದ್ದಾರೆ..

ರಾಮನಗರ : ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡ ಕೃಷ್ಣ ನಾಯಕ್ ಇಂದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಬಿಡದಿಯ ಕೇತುಗಾನಹಳ್ಳಿಯ ತೋಟದ ಮನೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ‌ ಜೆಡಿಎಸ್​​​ಗೆ ಕೃಷ್ಣ ನಾಯಕ್ ಸೇರ್ಪಡೆಯಾಗಿದ್ದಾರೆ.

ಜೆಡಿಎಸ್ ಸೇರ್ಪಡೆಗೊಂಡ ಕಾಂಗ್ರೆಸ್ ಮುಖಂಡ..

ಕೃಷ್ಣನಾಯಕ್ ತಮ್ಮ ಸಾವಿರಾರು ಕಾರ್ಯಕರ್ತರು ಹಾಗೂ ಪ್ರಮುಖ ಕಾಂಗ್ರೆಸ್ ಮುಖಂಡರ ಜೊತೆಗೆ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡರು. ಕಳೆದ 2 ವರ್ಷಗಳಿಂದ ಕಾಂಗ್ರೆಸ್ ಪಕ್ಷದಿಂದ ದೂರವೇ ಉಳಿದಿದ್ದ ಕೃಷ್ಣ ನಾಯಕ್, ಇಂದು ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಿಕೊಂಡಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಜೆಡಿಎಸ್​ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಕೃಷ್ಣ ನಾಯಕ್ ಜತೆಗೆ ಜೆಡಿಎಸ್‌ಗೆ ಸೇರ್ಪಡೆಗೊಂಡು ಪಕ್ಷ ಸಂಘಟನೆ ನಡೆಸುವಂತೆ ಹೆಚ್‌ಡಿಕೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.