ಮಚ್ಚಿನಿಂದ ಹೊಡೆದು ಬರ್ಬರವಾಗಿ ಕೊಲೆ : ಬೆಳ್ಳಂಬೆಳಗ್ಗೆ ರಾಮನಗರದಲ್ಲಿ ಹರಿದ ನೆತ್ತರು

author img

By

Published : Dec 24, 2021, 10:22 AM IST

ಕೊಲೆ

ರಾಮನಗರದ ಚನ್ನಪಟ್ಟಣ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ಸಂಬಂಧಿಕನೊಬ್ಬ ಮಚ್ಚಿನಿಂದ ಹೊಡೆದು ಹಲ್ಲೆ ಮಾಡಿದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..

ರಾಮನಗರ : ಕೌಟುಂಬಿಕ ಕಲಹದ ಹಿನ್ನೆಲೆ ಬೆಳ್ಳಂಬೆಳಗ್ಗೆ ಮಚ್ಚಿನಿಂದ ಹೊಡೆದು ಮಹಿಳೆಯನ್ನ ಬರ್ಬರವಾಗಿ ಕೊಲೆ ಮಾಡಿ ಮತ್ತೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ನಡೆದಿದೆ.

ಜಯಮ್ಮ(65) ಎಂಬುವರು ಕೊಲೆಯಾದ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನೆಲೆ ಸಂಬಂಧಿಕರೊಬ್ಬರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜಯಮ್ಮನ ಮಗ ಸಿದ್ದರಾಜು ಮೇಲೆ ಕೂಡ ಮಚ್ಚಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಇಂದು ಮುಂಜಾನೆ 6 ಗಂಟೆಗೆ ಈ ಘಟನೆ ನಡೆದಿದ್ದು, ಜಯಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತೂಬಿನಕೆರೆ ಗ್ರಾಮದಲ್ಲಿ ನಡೆದ ಬರ್ಬರ ಕೊಲೆ

ಗಾಯಗೊಂಡ ಸಿದ್ದರಾಜು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಆತನ ಸ್ಥಿತಿ ಕೂಡ ಗಂಭೀರವಾಗಿದೆ. ಈ ಕುರಿತು ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.