ಚನ್ನಪಟ್ಟಣಕ್ಕೆ ಆಗಮಿಸಿದ ಕಿಚ್ಚ ಸುದೀಪ್: ಚಾಮುಂಡೇಶ್ವರಿ ವಿಗ್ರಹಕ್ಕೆ ಪೂಜೆ

author img

By

Published : Sep 3, 2021, 1:58 PM IST

Updated : Sep 3, 2021, 2:23 PM IST

Actor Kiccha Sudeep

ಜನ್ಮದಿನವಾದ ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದ ನಟ ಸುದೀಪ್ ಇಂದು ರಾಮನಗರದ ಚನ್ನಪಟ್ಟಣ ತಾಲೂಕಿನ ಗೌಡಗೆರೆಗೆ ಬಂದು 68 ಅಡಿ ಎತ್ತರದ ವಿಶ್ವ ವಿಖ್ಯಾತ ಚಾಮುಂಡೇಶ್ವರಿ ವಿಗ್ರಹಕ್ಕೆ ಪೂಜೆ ಸಲ್ಲಿಸಿದ್ದಾರೆ.

ಚನ್ನಪಟ್ಟಣ (ರಾಮನಗರ): ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಇಂದು ಚನ್ನಪಟ್ಟಣ ತಾಲೂಕಿನ ಗೌಡಗೆರೆಯಲ್ಲಿರುವ 68 ಅಡಿ ಎತ್ತರದ ವಿಶ್ವ ವಿಖ್ಯಾತ ಚಾಮುಂಡೇಶ್ವರಿ ವಿಗ್ರಹಕ್ಕೆ ಪೂಜೆ ಸಲ್ಲಿಸಿದರು.

ಚನ್ನಪಟ್ಟಣಕ್ಕೆ ಆಗಮಿಸಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪೂಜೆ ಸಲ್ಲಿಸಿದ ಕಿಚ್ಚ ಸುದೀಪ್

ನಿನ್ನೆಯಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ನಟ ಸುದೀಪ್​, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದರು. ಇಂದು ಗೌಡಗೆರೆಯಲ್ಲಿರುವ ವಿಶ್ವದ ಅತಿ ಎತ್ತರದ ಚಾಮುಂಡೇಶ್ವರಿ ವಿಗ್ರಹಕ್ಕೆ ಪೂಜೆ ಸಲ್ಲಿಸಿ, ದರ್ಶನ ಪಡೆದಿದ್ದಾರೆ.

ಇದನ್ನೂ ಓದಿ: ಸುದೀಪ್​ ಜನ್ಮದಿನ ಆಚರಣೆ: ಅಭಿಮಾನಿಗಳಿಂದ ಕಿಚ್ಚನ ಕಟೌಟ್​ಗೆ ಕೋಣನ ರಕ್ತಾಭಿಷೇಕ!

ಸುದೀಪ್​ ಆಗಮನದ ವಿಷಯ ಮೊದಲೇ ತಿಳಿದಿದ್ದ ಸಾವಿರಾರು ಅಭಿಮಾನಿಗಳು ಎರಡ್ಮೂರು ತಾಸು ಮೊದಲೇ ದೇವಸ್ಥಾನದ ಬಳಿ ಜಮಾಯಿಸಿದ್ದರು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಡಬೇಕಾಯಿತು.

Last Updated :Sep 3, 2021, 2:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.