ರಾಮನಗರ: ಕಾರು ಡಿಕ್ಕಿಯಾಗಿ ಹೂ ಮಾರುತ್ತಿದ್ದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

author img

By

Published : Oct 15, 2021, 10:51 AM IST

car-hits-street-vendor-and-bike-rider-one-died

ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ರಿಡ್ಜ್ ಕಾರು ರಸ್ತೆಯ ಪಕ್ಕದಲ್ಲಿ ನಿಂತಿದ್ದ ಹೂ ಮಾರುತ್ತಿದ್ದ ವ್ಯಕ್ತಿಯನ್ನು ಬಲಿ ಪಡೆದ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರ: ಕಾರೊಂದು ಬೈಕ್ ಸವಾರನಿಗೆ ಡಿಕ್ಕಿಯಾಗಿ, ಪಕ್ಕದಲ್ಲೇ ಇದ್ದ ಹೂ ಮಾರುತ್ತಿದ್ದ ವ್ಯಕ್ತಿಯನ್ನು ಬಲಿ ಪಡೆದಿರುವ ಘಟನೆ ರಾಮನಗರದ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ. ಕಾರು ಚಾಲಕ ಮತ್ತು ಬೈಕ್​ ಸವಾರನಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಾರು ರಸ್ತೆಯ ಪಕ್ಕದಲ್ಲಿ ನಿಂತ್ತಿದ್ದ ಹೂ ಮಾರುತ್ತಿದ್ದ ಓರ್ವ ವ್ಯಕ್ತಿಗೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿಯಾಗಿದೆ. ಸ್ಥಳದಲ್ಲೇ ಹೂ ಮಾರುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಭೇಟಿ ನೀಡಿರುವ ರಾಮನಗರ ಸಂಚಾರ ಪೊಲೀಸರು ದೂರು ದಾಖಲಿಸಿಕೊಂಡು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಗಾಯಾಳುಗಳಿಗೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ನೋಡಲು ಥೇಟ್‌ ದೆಹಲಿ ಸಿಎಂ ಕೇಜ್ರಿವಾಲ್ ರೀತಿ ಕಾಣುವ ಚಾಟ್‌ ಮಾರಾಟಗಾರ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.