ETV Bharat / state

ರಾಮನಗರ: ನಿರ್ಮಾಣ ಹಂತದ ಕಟ್ಟಡ ಕುಸಿದು ಬಾಲ ಕಾರ್ಮಿಕ ದುರ್ಮರಣ

author img

By

Published : Jan 29, 2022, 7:26 PM IST

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಬಾಲ ಕಾರ್ಮಿಕನೋರ್ವ ಮೃತಪಟ್ಟಿದ್ದಾನೆ.

Boy  died by building collapse in Ramnagar
ರಾಮನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಾಲಕ ಸಾವು

ರಾಮನಗರ: ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಬಾಲ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿಯಲ್ಲಿ ಘಟನೆ ‌ನಡೆದಿದೆ.

Boy  died by building collapse in Ramnagar
ಮೃತ ಬಾಲ ಕಾರ್ಮಿಕ

ಭೀಮಾನಾಯ್ಕ್​​​ (13) ಮೃತ ಬಾಲ ಕಾರ್ಮಿಕ. ಈತ ಬಳ್ಳಾರಿ ಜಿಲ್ಲೆಯ ಶಿರುಗುಪ್ಪ ತಾಲೂಕಿನ ನಿವಾಸಿ ಎಂದು ತಿಳಿದುಬಂದಿದೆ. ಮೊದಲ ಹಂತದ ಮೋಲ್ಡ್ ಮುಗಿದು, ಎರಡನೇ ಹಂತಹ ಮೋಲ್ಡ್ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕಟ್ಟಡದ ಪಿಲ್ಲರ್ ಕುಸಿದು ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ರಾಮನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಾಲಕ ಸಾವು

ಇದನ್ನೂ ಓದಿ: ನೈಟ್ ಕರ್ಫ್ಯೂ ರದ್ದು ಬೆನ್ನಲ್ಲೇ ಶನಿವಾರವೂ ಶಾಲೆ ಆರಂಭಿಸುವಂತೆ ಆದೇಶ

ಈ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.