ETV Bharat / state

ಕೋವಿಡ್​ ನಿಯಮ ಉಲ್ಲಂಘನೆ ಆರೋಪ: ಡಿಕೆಶಿ, ಸಿದ್ದರಾಮಯ್ಯ ಸೇರಿ 41 ಜನರ ವಿರುದ್ಧ ಎಫ್​ಐಆರ್​

author img

By

Published : Feb 28, 2022, 4:13 PM IST

ಅನುಮತಿ ಪಡೆಯದೆ ಕೋವಿಡ್​​ ನಿಯಮಾವಳಿ ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಆರೋಪದ ಮೇಲೆ ಡಿ.ಕೆ. ಶಿವಕುಮಾರ್, ಪ್ರತಿಪಕ್ಷನಾಯಕ‌ ಸಿದ್ದರಾಮಯ್ಯ ಹಾಗೂ ಸಂಸದ ಡಿ.ಕೆ. ಸುರೇಶ್ ಸೇರಿ 41 ಜನರ ವಿರುದ್ಧ ರಾಮನಗರ ಪೊಲೀಸ್ ಠಾಣೆಯಲ್ಲಿ‌ ಎಫ್​ಐಆರ್​ ಹಾಕಲಾಗಿದೆ.

mekedatu padayatra
ಮೇಕೆದಾಟು ಪಾದಯಾತ್ರೆ

ರಾಮನಗರ: ಅನುಮತಿ ಪಡೆಯದೆ, ಕೋವಿಡ್​​ ನಿಯಮಾವಳಿ ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ‌ ಸಿದ್ದರಾಮಯ್ಯ ಹಾಗೂ ಸಂಸದ ಡಿ.ಕೆ. ಸುರೇಶ್ ಸೇರಿದಂತೆ 41 ಮಂದಿ‌ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಎಫ್​ಐಆರ್ ಪ್ರತಿ
ಎಫ್​ಐಆರ್ ಪ್ರತಿ

ರಾಮನಗರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದ್ದು, ಭಾನುವಾರ ಮೇಕೆದಾಟಿನಲ್ಲಿ ಕೋವಿಡ್ ನಿಯಮ ಉಲ್ಲಂಘನೆ ‌ಮಾಡಿದ ಆರೋಪದ ಮೇಲೆ ಎಫ್​​ಐಅರ್ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಎಫ್​ಐಆರ್ ಪ್ರತಿ
ಎಫ್​ಐಆರ್ ಪ್ರತಿ

ಡಿಕೆಶಿ ಹಾಗು ಸಿದ್ದರಾಮಯ್ಯ ನೇತೃತ್ವದಲ್ಲಿ ರೇಷ್ಮೆನಗರಿ ರಾಮನಗರದಿಂದ 2ನೇ ಹಂತದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್​ ಮೇಕೆದಾಟು ಪಾದಯಾತ್ರೆ ಒಬ್ಬ ವ್ಯಕ್ತಿಯ ಅಕ್ರಮ ಸಂಪತ್ತಿನ ಪ್ರದರ್ಶನ: ಸಂಸದ ಶ್ರೀನಿವಾಸ ಪ್ರಸಾದ್ ವ್ಯಂಗ್ಯ

ಕೋವಿಡ್ ನಿಮಯ ಉಲ್ಲಂಘನೆ ಆರೋಪ ದೂರು ದಾಖಲಾಗಿದ್ದು, ರಾಮನಗರ ತಹಶೀಲ್ದಾರ್ ದೂರು ನೀಡಿದ ಹಿನ್ನೆಲೆ ರಾಮನಗರ ಪೊಲೀಸ್ ಠಾಣೆಯಲ್ಲಿ‌ ಕೇಸ್​ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.