ETV Bharat / state

ಟೈರ್​​​​ ಗೋಡೌನ್​​​ನಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

author img

By

Published : Jun 17, 2020, 1:10 PM IST

Fire accident in Tire godown
ಟೈಯರ್ ಗೋಡಾನ್​ನಲ್ಲಿ ಅಗ್ನಿ ಅವಘಡ

ಟೈರ್​​​​​​​ ಗೋಡಾನ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ರಾಮನಗರ ಪೊಲೀಸರು ‌ಭೇಟಿ‌ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ರಾಮನಗರ : ಟೈರ್​ ಸಂಗ್ರಹ ಮಾಡಿದ್ದ ಗೋಡೌನ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಗೋಡೌನ್​​​​ ಸುಟ್ಟು ಕರಕಲಾದ ಘಟನೆ‌ ನಡೆದಿದೆ.

ರಾಮನಗರದ ಹುಣಸನಹಳ್ಳಿ ರಸ್ತೆಯಲ್ಲಿರುವ ಯಾರಬ್ ನಗರದ ಗೋಡೌನ್​​​​​​​ನಲ್ಲಿ ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆಗೆ‌ ಸಿಕ್ಕಿ ಗೋಡೌನ್​ ಹೊತ್ತಿ ಉರಿಯತೊಡಗಿದೆ. ಇದನ್ನು ಗಮನಿಸಿದ ಸ್ಥಳೀಯರು‌ ಪೊಲೀಸರಿಗೆ‌ ಮಾಹಿತಿ‌ ನೀಡಿದ್ದಾರೆ. ಸ್ಥಳಕ್ಕೆ‌ ಆಗಮಿಸಿದ ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಸತತ 30 ನಿಮಿಷಗಳ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದೆ.

ಟೈರ್​ ಗೋಡೌನ್​ನಲ್ಲಿ ಅಗ್ನಿ ಅವಘಡ

ನಗರ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಗೋಡೌನ್​ನಲ್ಲಿ ಅಕ್ರಮವಾಗಿ ಟೈರ್ ಫ್ಯಾಕ್ಟರಿ ನಡೆಸಲಾಗುತ್ತಿತ್ತು ಎನ್ನುವ ಆರೋಪ ಕೇಳಿ ಬರುತ್ತಿದೆ. ಅಕ್ರಂ ಷರೀಫ್ ಎಂಬುವವರಿಗೆ ಸೇರಿರುವ ಹಳೆ ಟೈರ್ ಸಂಗ್ರಹದ ಗೋಡೌನ್​ನ ಅಕ್ಕ -ಪಕ್ಕದಲ್ಲಿ ಮನೆಗಳಿಲ್ಲದಿರುವುದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ನೂರಾರು ಟೈರ್​​​​​​ಗಳು ಏಕಕಾಲದಲ್ಲಿ ಹೊತ್ತಿ ಉರಿದ ಹಿನ್ನೆಲೆಯಲ್ಲಿ ಬೆಂಕಿ‌ ಕೆನ್ನಾಲಿಗೆ ತಹಬದಿಗೆ ತರಲು‌ ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸಪಡಬೇಕಾಯಿತು.

ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿರಬಹುದೆಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ರಾಮನಗರ ಪೊಲೀಸರು ‌ಭೇಟಿ‌ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.