ಗಣೇಶೋತ್ಸವ: ಬಾಲ ಗಣಪನೊಂದಿಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತುಕತೆ

author img

By

Published : Sep 10, 2021, 12:07 PM IST

ಬಾಲ ಗಣಪನೊಂದಿಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತುಕತೆ

ಮಾಜಿ ಸಿಎಂ ಕುಮಾರಸ್ವಾಮಿ ಮನೆಯಲ್ಲಿ ಗಣೇಶೋತ್ಸವ ಸಂಭ್ರಮ ಮನೆ ಮಾಡಿದೆ. ಹೆಚ್​ಡಿಕೆ ಮನೆಗೆ ಬಾಲ ಗಣಪ ಬಂದಿದ್ದು, ಅವರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದೆ.

ರಾಮನಗರ : ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಅವರ ಬಿಡದಿಯ ಕೇತುಗಾನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಗಣೇಶೋತ್ಸವ ಸಂಭ್ರಮ ಮನೆ ಮಾಡಿದೆ.

ಬಾಲ ಗಣಪನೊಂದಿಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತುಕತೆ

ಬಿಡದಿ ತೋಟದ ಮನೆಯಲ್ಲಿ ಕುಮಾರಸ್ವಾಮಿ ಗಣೇಶ ಹಬ್ಬ ಆಚರಣೆ ಮಾಡುತ್ತಿದ್ದು, ಗಣಪತಿ ವೇಷ ಧರಿಸಿದ ಬಾಲಕನೊಬ್ಬ ಕುಮಾರಸ್ವಾಮಿಯನ್ನು ಭೇಟಿ ಮಾಡಲು ಆಗಮಿಸಿದ್ದ. ಗಣೇಶ ವೇಷಧಾರಿ ಬಾಲಕನ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಕೆಲ ಕಾಲ ಮಾತುಕತೆ ನಡೆಸಿದರು.

ಇದನ್ನೂ ಓದಿ: ನಾಡಿನೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ: ಸಿಎಂ ಸೇರಿದಂತೆ ನಾಯಕರಿಂದ ಶುಭಾಶಯ

ಇಂದು ಹೆಚ್​ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ದಂಪತಿ ತೋಟದ ಮನೆಗೆ ಭೇಟಿ ನೀಡುವ ನಿರೀಕ್ಷೆಯಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.