ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್​ ಕುಟುಂಬ

author img

By

Published : Sep 3, 2021, 6:42 PM IST

Kiccha Sudeep family

ಇಂದು ನಟ ಸುದೀಪ್​ ಕುಟುಂಬ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಸಮೀಪದ ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿತ್ತು.

ರಾಮನಗರ: ನಟ ಕಿಚ್ಚ ಸುದೀಪ್​ ಕನಕಪುರ ತಾಲೂಕಿನ ಸಾತನೂರು ಸಮೀಪದ ಕಬ್ಬಾಳಮ್ಮ ದೇವಾಲಯಕ್ಕೆ ಕುಟುಂಬ ಸಮೇತವಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್​ ಕುಟುಂಬ

ಇದಕ್ಕೂ‌ ಮೊದಲು ವಿಶ್ವವಿಖ್ಯಾತ ಚನ್ನಪಟ್ಟಣದ ಗೌಡಗೆರೆ ಗ್ರಾಮದಲ್ಲಿ ಸ್ಥಾಪನೆಗೊಂಡಿರುವ ಚಾಮುಂಡೇಶ್ವರಿ ವಿಗ್ರಹದ ದರ್ಶನ ಪಡೆದು, ನಂತರ ಕನಕಪುರಕ್ಕೆ ಆಗಮಿಸಿ ತಾಯಿ ಕಬ್ಬಾಳಮ್ಮ ದೇವಾಲಯಕ್ಕೆ ಆಗಮಿಸಿದ್ದರು.

ಇನ್ನು ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯದ ಬಳಿ ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಯಿತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಇದನ್ನೂ ಓದಿ: ಮೈನೆ ಪ್ಯಾರ್ ಕಿಯಾದಲ್ಲಿ ಸಲ್ಮಾನ್​​ಗೆ ಅಪ್ಪುಗೆ, ಚುಂಬನ : ಭಾಗ್ಯಶ್ರೀ ಬಿಚ್ಚಿಟ್ಟರು ಇದರ ಸ್ವಾರಸ್ಯಕರ ಘಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.